<p><strong>ಉಡುಪಿ</strong>: ಪ್ರತಿಯೊಬ್ಬ ಭಾರತೀಯ ಕನ್ನಡಿಗನಲ್ಲ, ಆದರೆ ಪ್ರತಿಯೊಬ್ಬ ಕನ್ನಡಿಗ ಭಾರತೀಯ. ಆದ್ದರಿಂದ ನಾವು ಭಾರತೀಯರಾಗಿ ಒಗ್ಗೂಡೋಣ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.<br><br>ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು, ಚುಟುಕು ಬರಹಗಾರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಹಿಂದೆ ಕನ್ನಡ ಮಾತನಾಡುವವರ ಕ್ಷೇತ್ರಗಳು ಹರಿದು ಹಂಚಿ ಹೋಗಿದ್ದವು ಅದನ್ನು ಒಗ್ಗೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಲಾಗಿತ್ತು. ಈ ಮೂಲಕ ಕನ್ನಡಿಗರನ್ನು ಒಂದುಗೂಡಿಸಲಾಗಿತ್ತು. ಸಾಹಿತಿಗಳು, ಕಲಾವಿದರು ಮತ್ತು ಇಂತಹ ಸಮ್ಮೇಳನಗಳು ಭಾರತೀಯರ ಏಕತೆಗಾಗಿ ಇಂದು ಕೆಲಸ ಮಾಡಬೇಕು ಎಂದರು.</p>.<p>ರಾಜಕೀಯಕ್ಕೆ ಬರುವ ಮೊದಲು ನಾನು ಯಾವ ಜಾತಿ ಎಂಬುದು ಗೊತ್ತಿರಲಿಲ್ಲ. ಅನಂತರ ತಿಳಿಯಿತು ಮೈಸೂರು ಅರಸು ಮನೆತನದವರು ಕೂಡ ಒಬಿಸಿಗೆ ಸೇರಿದವರೆಂದು. ಅಂತಹ ಒಂದು ಸಮುದಾಯವನ್ನು ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆ ಇದೆ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಾಹಿತ್ಯ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸನ್ನು ಗೆಲ್ಲುವ ಪ್ರಯತ್ನ ಶ್ಲಾಘನೀಯ ಎಂದರು.</p>.<p>ಈ ಮೊದಲು ಬಲಪಂಥೀಯ ಸಾಹಿತಿಗಳಿಗೆ ವೇದಿಕೆಗಳೇ ಇರಲಿಲ್ಲ. ಕೆಲವರನ್ನು ಓಲೈಕೆ ಮಾಡುತ್ತಿದ್ದ ಸಾಹಿತಿಗಳು ಬಿಜೆಪಿ ಮತ್ತು ಬಲಪಂಥೀಯರನ್ನು ತೆಗಳುವ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ಇದ್ದರು.</p>.<p>‘ಯುರೋಪ್ ಮಾದರಿ ಶಿಕ್ಷಣದಿಂದ ಭಾರತೀಯತೆಗೆ ಧಕ್ಕೆ’ </p><p>ದೇಶದಲ್ಲಿ ಬ್ರಿಟಿಷರ ಆಳ್ವಿಕೆ ಬಂದ ನಂತರ ಯುರೋಪ್ ಮಾದರಿಯ ಶಿಕ್ಷಣವನ್ನು ಪ್ರಾರಂಭಿಸಲಾಯಿತು ಇದರಿಂದಾಗಿ ನಮ್ಮ ಸಾಹಿತ್ಯದಲ್ಲಿ ಭಾರತೀಯತೆ ಕಡಿಮೆಯಾಯಿತು ಎಂದು ಸಾಹಿತಿ ಪ್ರೇಮ್ಶೇಖರ್ ಅಭಿಪ್ರಾಯಪಟ್ಟರು.</p><p> ‘ಬದಲಾದ ರಾಜಕಾರಣದಿಂದ ದಮನಗೊಳ್ಳುತ್ತಿರುವ ಹಿಂದೂಗಳ ಬದುಕು–ಸಾಹಿತ್ಯ’ ಎಂಬ ವಿಷಯದ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋಗುವಾಗ ಮಾನಸಿಕವಾಗಿ ಅವರಿಗೆ ಗುಲಾಮರಾಗಿರುವ ಸರ್ಕಾರವನ್ನು ಬಿಟ್ಟು ಹೋದರು. ಆ ಸರ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದವರು ಸಂಘ ಪರಿವಾರದವರು ಎಂದರು. ಧರ್ಮದ ಆಧಾರದಲ್ಲಿ ದೇಶ ವಿಭಜನೆಯಾದಾಗ ವಿರೋಧ ವ್ಯಕ್ತಪಡಿಸಿದ್ದು ಕೂಡ ಸಂಘ ಮಾತ್ರ ಎಂದು ಅವರು ಹೇಳಿದರು. </p><p>ಸಾಹಿತಿ ದಯಾನಂದ ಕತ್ತಲ್ಸಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಪ್ರತಿಯೊಬ್ಬ ಭಾರತೀಯ ಕನ್ನಡಿಗನಲ್ಲ, ಆದರೆ ಪ್ರತಿಯೊಬ್ಬ ಕನ್ನಡಿಗ ಭಾರತೀಯ. ಆದ್ದರಿಂದ ನಾವು ಭಾರತೀಯರಾಗಿ ಒಗ್ಗೂಡೋಣ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.<br><br>ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು, ಚುಟುಕು ಬರಹಗಾರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಹಿಂದೆ ಕನ್ನಡ ಮಾತನಾಡುವವರ ಕ್ಷೇತ್ರಗಳು ಹರಿದು ಹಂಚಿ ಹೋಗಿದ್ದವು ಅದನ್ನು ಒಗ್ಗೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಲಾಗಿತ್ತು. ಈ ಮೂಲಕ ಕನ್ನಡಿಗರನ್ನು ಒಂದುಗೂಡಿಸಲಾಗಿತ್ತು. ಸಾಹಿತಿಗಳು, ಕಲಾವಿದರು ಮತ್ತು ಇಂತಹ ಸಮ್ಮೇಳನಗಳು ಭಾರತೀಯರ ಏಕತೆಗಾಗಿ ಇಂದು ಕೆಲಸ ಮಾಡಬೇಕು ಎಂದರು.</p>.<p>ರಾಜಕೀಯಕ್ಕೆ ಬರುವ ಮೊದಲು ನಾನು ಯಾವ ಜಾತಿ ಎಂಬುದು ಗೊತ್ತಿರಲಿಲ್ಲ. ಅನಂತರ ತಿಳಿಯಿತು ಮೈಸೂರು ಅರಸು ಮನೆತನದವರು ಕೂಡ ಒಬಿಸಿಗೆ ಸೇರಿದವರೆಂದು. ಅಂತಹ ಒಂದು ಸಮುದಾಯವನ್ನು ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆ ಇದೆ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಾಹಿತ್ಯ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸನ್ನು ಗೆಲ್ಲುವ ಪ್ರಯತ್ನ ಶ್ಲಾಘನೀಯ ಎಂದರು.</p>.<p>ಈ ಮೊದಲು ಬಲಪಂಥೀಯ ಸಾಹಿತಿಗಳಿಗೆ ವೇದಿಕೆಗಳೇ ಇರಲಿಲ್ಲ. ಕೆಲವರನ್ನು ಓಲೈಕೆ ಮಾಡುತ್ತಿದ್ದ ಸಾಹಿತಿಗಳು ಬಿಜೆಪಿ ಮತ್ತು ಬಲಪಂಥೀಯರನ್ನು ತೆಗಳುವ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ಇದ್ದರು.</p>.<p>‘ಯುರೋಪ್ ಮಾದರಿ ಶಿಕ್ಷಣದಿಂದ ಭಾರತೀಯತೆಗೆ ಧಕ್ಕೆ’ </p><p>ದೇಶದಲ್ಲಿ ಬ್ರಿಟಿಷರ ಆಳ್ವಿಕೆ ಬಂದ ನಂತರ ಯುರೋಪ್ ಮಾದರಿಯ ಶಿಕ್ಷಣವನ್ನು ಪ್ರಾರಂಭಿಸಲಾಯಿತು ಇದರಿಂದಾಗಿ ನಮ್ಮ ಸಾಹಿತ್ಯದಲ್ಲಿ ಭಾರತೀಯತೆ ಕಡಿಮೆಯಾಯಿತು ಎಂದು ಸಾಹಿತಿ ಪ್ರೇಮ್ಶೇಖರ್ ಅಭಿಪ್ರಾಯಪಟ್ಟರು.</p><p> ‘ಬದಲಾದ ರಾಜಕಾರಣದಿಂದ ದಮನಗೊಳ್ಳುತ್ತಿರುವ ಹಿಂದೂಗಳ ಬದುಕು–ಸಾಹಿತ್ಯ’ ಎಂಬ ವಿಷಯದ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋಗುವಾಗ ಮಾನಸಿಕವಾಗಿ ಅವರಿಗೆ ಗುಲಾಮರಾಗಿರುವ ಸರ್ಕಾರವನ್ನು ಬಿಟ್ಟು ಹೋದರು. ಆ ಸರ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದವರು ಸಂಘ ಪರಿವಾರದವರು ಎಂದರು. ಧರ್ಮದ ಆಧಾರದಲ್ಲಿ ದೇಶ ವಿಭಜನೆಯಾದಾಗ ವಿರೋಧ ವ್ಯಕ್ತಪಡಿಸಿದ್ದು ಕೂಡ ಸಂಘ ಮಾತ್ರ ಎಂದು ಅವರು ಹೇಳಿದರು. </p><p>ಸಾಹಿತಿ ದಯಾನಂದ ಕತ್ತಲ್ಸಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>