ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಯನ್ಸ್ ಕ್ಲಬ್: ಬಸ್ ತಂಗುದಾಣ ಉದ್ಘಾಟನೆ

ಬನ್ನಾಡಿ ವಡ್ಡರ್ಸೆ ಲಯನ್ಸ್ ಕ್ಲಬ್‌ಗೆ ಲಯನ್ಸ್ ಜಿಲ್ಲಾ ಗವರ್ನರ್ ಎಂ.ಕೆ.ಭಟ್‌ ಭೇಟಿ
Last Updated 4 ಫೆಬ್ರುವರಿ 2023, 5:44 IST
ಅಕ್ಷರ ಗಾತ್ರ

ಕೋಟ (ಬ್ರಹ್ಮಾವರ): ಬನ್ನಾಡಿ ವಡ್ಡರ್ಸೆ ಲಯನ್ಸ್‌ ಕ್ಲಬ್‌ಗೆ ಲಯನ್ಸ್ ಜಿಲ್ಲಾ ಕ್ಲಬ್ ಗವರ್ನರ್ ಡಾ.ಎಂ.ಕೆ.ಭಟ್‌ ಮತ್ತು ಸವಿತಾ ಎಂ.ಕೆ. ಭಟ್ ಭೇಟಿ ನೀಡಿದ್ದರು.

ಸೇವಾ ಚಟುವಟಿಕೆಯ ಅಂಗವಾಗಿ ಅಚ್ಲಾಡಿಯಲ್ಲಿ ನಿರ್ಮಿಸಿರುವ ಬಸ್ ತಂಗು ದಾಣ ಉದ್ಘಾಟಿಸಿದರು. ಸಪ್ನಾ ಸುರೇಶ್ ನೀಡಿದ ವಾಟರ್ ಫಿಲ್ಟರ್‌ ಮಧುವನ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಗೆ ಹಸ್ತಾಂತರಿಸಲಾಯಿತು.

ಬನ್ನಾಡಿ ವಾಸು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಆರೋಗ್ಯ ಸಮಸ್ಯೆ ಯಿಂದ ಬಳಲುತ್ತಿರುವ ಅಚ್ಲಾಡಿಯ ಕೃಷ್ಣ ಮರಕಾಲ ಅವರಿಗೆ ಆರ್ಥಿಕ ಸಹಾಯ ನೀಡಲಾಯಿತು.

ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕೋಶಾಧಿಕಾರಿ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ, ಕ್ಲಬ್ ನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ನಿಕಟ ಪೂರ್ವ ಅಧ್ಯಕ್ಷ ಕೊತ್ತಾಡಿ ಉದಯ ಕುಮಾರ್ ಶೆಟ್ಟಿ, ಸುರೇಂದ್ರ ಶೆಟ್ಟಿ ಕೊಮೆ, ಮಾಜಿ ಕಾರ್ಯದರ್ಶಿ ಬನ್ನಾಡಿ ಶರತ್ ಶೆಟ್ಟಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT