<p><strong>ಉಡುಪಿ: </strong>ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ರಾಜ್ಯದಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ಗಳು ಬಂದ್ ಆಗಲಿರುವ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಶನಿವಾರವೇ ಮದ್ಯಖರೀದಿಗೆ ಮುಗಿಬಿದ್ದಿದ್ದ ದೃಶ್ಯ ಉಡುಪಿ ನಗರದ ಹಲವೆಡೆ ಕಂಡುಬಂತು.</p>.<p>ನಗರದ ಬಹುತೇಕ ಬಾರ್ಗಳ ಮುಂದೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದಟ್ಟಣೆ ಹೆಚ್ಚಾಗಿದ್ದರಿಂದ ಗ್ರಾಹಕರು ಸಾಲಿನಲ್ಲಿ ನಿಂತು ಮದ್ಯವನ್ನು ಖರೀದಿಸಿದರು. ಕೆಲವು ಬಾರ್ಗಳಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಎಂಆರ್ಪಿ ಮಳಿಗೆಯಲ್ಲಿ ದಟ್ಟಣೆ ಹೆಚ್ಚಾಗಿತ್ತು.</p>.<p>ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂ ಕರೆ ನೀಡಿದ್ದು, ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಿಂದ ಹೊರಬಾರದಂತೆ ಸಲಹೆ ನೀಡಿದ್ದಾರೆ.ಮನೆಯಲ್ಲಿ ದಿನವಿಡೀ ಸಮಯ ಕಳೆಯುವುದು ಕಷ್ಟ. ಬೇಜಾರು ಕಳೆಯಲು ಮದ್ಯ ಖರೀದಿಸುತ್ತಿರುವುದಾಗಿ ಗ್ರಾಹಕರೊಬ್ಬರು ಹೇಳಿದರು.</p>.<p>ಸರ್ಕಾರ ಅನಿರ್ಧಿಷ್ಟಾವಧಿಗೆ ಬಾರ್ಗಳನ್ನು ಮುಚ್ಚಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದರಿಂದ 15 ದಿನಕ್ಕಾಗುವಷ್ಟು ಮದ್ಯ ಖರೀದಿಸಿದ್ದೇನೆ ಎಂದು ಮತ್ತೊಬ್ಬರು ಹೇಳಿದರು.</p>.<p>ಕಾರಿನ ಡಿಕ್ಕಿ, ಸ್ಕೂಟರ್ ಸೀಟಿನ ಕೆಳಗಡೆ ಹಾಗೂ ದಿನಸಿ ಸಾಮಾನು ಕೊಂಡೊಯ್ಯುವ ಬ್ಯಾಗ್ಗಳಲ್ಲಿ ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ದೃಶ್ಯ ಬಹುತೇಕ ಬಾರ್ಗಳ ಮುಂದೆ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ರಾಜ್ಯದಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ಗಳು ಬಂದ್ ಆಗಲಿರುವ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಶನಿವಾರವೇ ಮದ್ಯಖರೀದಿಗೆ ಮುಗಿಬಿದ್ದಿದ್ದ ದೃಶ್ಯ ಉಡುಪಿ ನಗರದ ಹಲವೆಡೆ ಕಂಡುಬಂತು.</p>.<p>ನಗರದ ಬಹುತೇಕ ಬಾರ್ಗಳ ಮುಂದೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದಟ್ಟಣೆ ಹೆಚ್ಚಾಗಿದ್ದರಿಂದ ಗ್ರಾಹಕರು ಸಾಲಿನಲ್ಲಿ ನಿಂತು ಮದ್ಯವನ್ನು ಖರೀದಿಸಿದರು. ಕೆಲವು ಬಾರ್ಗಳಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಎಂಆರ್ಪಿ ಮಳಿಗೆಯಲ್ಲಿ ದಟ್ಟಣೆ ಹೆಚ್ಚಾಗಿತ್ತು.</p>.<p>ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂ ಕರೆ ನೀಡಿದ್ದು, ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಿಂದ ಹೊರಬಾರದಂತೆ ಸಲಹೆ ನೀಡಿದ್ದಾರೆ.ಮನೆಯಲ್ಲಿ ದಿನವಿಡೀ ಸಮಯ ಕಳೆಯುವುದು ಕಷ್ಟ. ಬೇಜಾರು ಕಳೆಯಲು ಮದ್ಯ ಖರೀದಿಸುತ್ತಿರುವುದಾಗಿ ಗ್ರಾಹಕರೊಬ್ಬರು ಹೇಳಿದರು.</p>.<p>ಸರ್ಕಾರ ಅನಿರ್ಧಿಷ್ಟಾವಧಿಗೆ ಬಾರ್ಗಳನ್ನು ಮುಚ್ಚಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದರಿಂದ 15 ದಿನಕ್ಕಾಗುವಷ್ಟು ಮದ್ಯ ಖರೀದಿಸಿದ್ದೇನೆ ಎಂದು ಮತ್ತೊಬ್ಬರು ಹೇಳಿದರು.</p>.<p>ಕಾರಿನ ಡಿಕ್ಕಿ, ಸ್ಕೂಟರ್ ಸೀಟಿನ ಕೆಳಗಡೆ ಹಾಗೂ ದಿನಸಿ ಸಾಮಾನು ಕೊಂಡೊಯ್ಯುವ ಬ್ಯಾಗ್ಗಳಲ್ಲಿ ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ದೃಶ್ಯ ಬಹುತೇಕ ಬಾರ್ಗಳ ಮುಂದೆ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>