<p><strong>ಉಡುಪಿ:</strong> ಕೊರೊನಾ ಲಾಕ್ಡೌನ್ ಅಂತ್ಯವಾದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿದ್ದ ನಗರ ಭಾನುವಾರ ಮತ್ತೆ ಸ್ತಬ್ಧವಾಗಿತ್ತು. ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಸರ್ಕಾರ ವಾರಕ್ಕೊಂದು ದಿನ ಲಾಕ್ಡೌನ್ ಘೋಷಿಸಿರುವ ಪರಿಣಾಮ ನಗರದಲ್ಲಿ ಮತ್ತೆ ಹಿಂದಿನ ಲಾಕ್ಡೌನ್ ಸನ್ನಿವೇಶ ನಿರ್ಮಾಣವಾಗಿತ್ತು.</p>.<p>ಸದಾಗಿಜಿಗಿಡುತ್ತಿದ್ದ ನಗರದ ಪ್ರಮುಖ ರಸ್ತೆಗಳಲ್ಲಿ ಮೌನ ಆವರಿಸಿತ್ತು. ಮಾರುಕಟ್ಟೆ, ಬಸ್ ನಿಲ್ದಾಣಗಳು ಬಿಕೊ ಎನ್ನುತ್ತಿದ್ದವು. ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಹೊರತುಪಡಿಸಿ ಇತರೆ ವಾಹನಗಳು ರಸ್ತೆಗಿಳಿಯಲಿಲ್ಲ. ಖಾಸಗಿ ಹಾಗೂ ಕೆಎಸ್ಆರ್ಟಿಸಿ ಸಾರಿಗೆ ವ್ಯವಸ್ಥೆಯೂ ಇರಲಿಲ್ಲ.</p>.<p>ಬೆಳಿಗ್ಗೆ, ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಿ ಮನೆ ಸೇರಿದ ಸಾರ್ವಜನಿಕರು ಮತ್ತೆ ಹೊರ ಬರಲಿಲ್ಲ. ಉಡುಪಿ–ಮಣಿಪಾಲ್ ರಸ್ತೆ, ಚಿತ್ತರಂಜನ್ ಸರ್ಕಲ್, ಕರಾವಳಿ ಬೈಪಾಸ್, ಅಂಬಲಪಾಡಿ, ಕವಿ ಮುದ್ದಣ್ಣ ಮಾರ್ಗದ ರಸ್ತೆಗಳು ನಿರ್ಜನವಾಗಿದ್ದವು.</p>.<p>ಮೆಡಿಕಲ್ ಶಾಪ್ಗಳು ಹಾಗೂ ಕೆಲವು ಆಸ್ಪತ್ರೆಗಳು ಮಾತ್ರ ತೆರೆದಿದ್ದವು. ಪಾರ್ಸೆಲ್ ಕೊಡಲು ಅವಕಾಶವಿದ್ದರೂ ಹೋಟೆಲ್ಗಳು ತೆರೆದಿರಲಿಲ್ಲ. ಮಾಂಸದಂಗಡಿಗಳಲ್ಲೂ ಹೆಚ್ಚಿನ ಜನಸಂದಣಿ ಕಂಡುಬರಲಿಲ್ಲ.</p>.<p>ಮಣಿಪಾಲ ಹಾಗೂ ಉಡುಪಿ ರಸ್ತೆಯಲ್ಲಿ ಅನಗತ್ಯವಾಗಿ ಬೈಕ್ನಲ್ಲಿ ಸಂಚರಿಸುತ್ತಿದ್ದ ಯುವಕರನ್ನು ತಡೆದ ಪೊಲೀಸರು ಎಚ್ಚರಿಕೆ ನೀಡಿ ಕಳಿಸಿದರು. ಪ್ರಮುಖ ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಪೊಲೀಸ್ ವಾಹನಗಳು ನಗರದಲ್ಲಿ ಗಸ್ತು ತಿರುಗುತ್ತಿದ್ದವು.</p>.<p><strong>ನಿರ್ಗತಿಕರ ಪರದಾಟ: </strong>ಬಹುತೇಕ ಹೋಟೆಲ್ಗಳು ಬಂದ್ ಆಗಿದ್ದರಿಂದ ಕೃಷ್ಣಮಠ, ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳ ಸುತ್ತಲೂ ತಂಗಿರುವ ನಿರ್ಗತಿಕರು ಆಹಾರಕ್ಕಾಗಿ ಪರದಾಡುವಂತಾಯಿತು. ಭಿಕ್ಷುಕರು ರಸ್ತೆ ಬದಿ, ಉದ್ಯಾನ ಹಾಗೂ ನಿರ್ಜನ ಪ್ರದೇಶಗಳಲ್ಲಿ ಮಲಗಿದ್ದ ದೃಶ್ಯ ಕಂಡುಬಂತು. ಕೆಲವರು ನಗರದೊಳಗೆ ಅಲೆಯುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕೊರೊನಾ ಲಾಕ್ಡೌನ್ ಅಂತ್ಯವಾದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿದ್ದ ನಗರ ಭಾನುವಾರ ಮತ್ತೆ ಸ್ತಬ್ಧವಾಗಿತ್ತು. ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಸರ್ಕಾರ ವಾರಕ್ಕೊಂದು ದಿನ ಲಾಕ್ಡೌನ್ ಘೋಷಿಸಿರುವ ಪರಿಣಾಮ ನಗರದಲ್ಲಿ ಮತ್ತೆ ಹಿಂದಿನ ಲಾಕ್ಡೌನ್ ಸನ್ನಿವೇಶ ನಿರ್ಮಾಣವಾಗಿತ್ತು.</p>.<p>ಸದಾಗಿಜಿಗಿಡುತ್ತಿದ್ದ ನಗರದ ಪ್ರಮುಖ ರಸ್ತೆಗಳಲ್ಲಿ ಮೌನ ಆವರಿಸಿತ್ತು. ಮಾರುಕಟ್ಟೆ, ಬಸ್ ನಿಲ್ದಾಣಗಳು ಬಿಕೊ ಎನ್ನುತ್ತಿದ್ದವು. ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಹೊರತುಪಡಿಸಿ ಇತರೆ ವಾಹನಗಳು ರಸ್ತೆಗಿಳಿಯಲಿಲ್ಲ. ಖಾಸಗಿ ಹಾಗೂ ಕೆಎಸ್ಆರ್ಟಿಸಿ ಸಾರಿಗೆ ವ್ಯವಸ್ಥೆಯೂ ಇರಲಿಲ್ಲ.</p>.<p>ಬೆಳಿಗ್ಗೆ, ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಿ ಮನೆ ಸೇರಿದ ಸಾರ್ವಜನಿಕರು ಮತ್ತೆ ಹೊರ ಬರಲಿಲ್ಲ. ಉಡುಪಿ–ಮಣಿಪಾಲ್ ರಸ್ತೆ, ಚಿತ್ತರಂಜನ್ ಸರ್ಕಲ್, ಕರಾವಳಿ ಬೈಪಾಸ್, ಅಂಬಲಪಾಡಿ, ಕವಿ ಮುದ್ದಣ್ಣ ಮಾರ್ಗದ ರಸ್ತೆಗಳು ನಿರ್ಜನವಾಗಿದ್ದವು.</p>.<p>ಮೆಡಿಕಲ್ ಶಾಪ್ಗಳು ಹಾಗೂ ಕೆಲವು ಆಸ್ಪತ್ರೆಗಳು ಮಾತ್ರ ತೆರೆದಿದ್ದವು. ಪಾರ್ಸೆಲ್ ಕೊಡಲು ಅವಕಾಶವಿದ್ದರೂ ಹೋಟೆಲ್ಗಳು ತೆರೆದಿರಲಿಲ್ಲ. ಮಾಂಸದಂಗಡಿಗಳಲ್ಲೂ ಹೆಚ್ಚಿನ ಜನಸಂದಣಿ ಕಂಡುಬರಲಿಲ್ಲ.</p>.<p>ಮಣಿಪಾಲ ಹಾಗೂ ಉಡುಪಿ ರಸ್ತೆಯಲ್ಲಿ ಅನಗತ್ಯವಾಗಿ ಬೈಕ್ನಲ್ಲಿ ಸಂಚರಿಸುತ್ತಿದ್ದ ಯುವಕರನ್ನು ತಡೆದ ಪೊಲೀಸರು ಎಚ್ಚರಿಕೆ ನೀಡಿ ಕಳಿಸಿದರು. ಪ್ರಮುಖ ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಪೊಲೀಸ್ ವಾಹನಗಳು ನಗರದಲ್ಲಿ ಗಸ್ತು ತಿರುಗುತ್ತಿದ್ದವು.</p>.<p><strong>ನಿರ್ಗತಿಕರ ಪರದಾಟ: </strong>ಬಹುತೇಕ ಹೋಟೆಲ್ಗಳು ಬಂದ್ ಆಗಿದ್ದರಿಂದ ಕೃಷ್ಣಮಠ, ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳ ಸುತ್ತಲೂ ತಂಗಿರುವ ನಿರ್ಗತಿಕರು ಆಹಾರಕ್ಕಾಗಿ ಪರದಾಡುವಂತಾಯಿತು. ಭಿಕ್ಷುಕರು ರಸ್ತೆ ಬದಿ, ಉದ್ಯಾನ ಹಾಗೂ ನಿರ್ಜನ ಪ್ರದೇಶಗಳಲ್ಲಿ ಮಲಗಿದ್ದ ದೃಶ್ಯ ಕಂಡುಬಂತು. ಕೆಲವರು ನಗರದೊಳಗೆ ಅಲೆಯುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>