ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳದ ರಾಧಾಕೃಷ್ಣ ನಾಯಕ್‌ಗೆ ಬೆಂಬಲ: ಸಿದ್ದರಾಮಯ್ಯ ವಿರುದ್ಧ ದೂರು

Last Updated 10 ಜುಲೈ 2021, 15:30 IST
ಅಕ್ಷರ ಗಾತ್ರ

ಉಡುಪಿ: ಫೇಸ್‌ಬುಕ್‌ನಲ್ಲಿ ಸೇನೆಯ ಬಗ್ಗೆ ಅವಹೇಳನಕಾರಿ ಬರಹ ಹಾಕಿರುವ ಕಾರ್ಕಳದ ರಾಧಾಕೃಷ್ಣ ನಾಯಕ್ ಪರ ಬೆಂಬಲಕ್ಕೆ ನಿಂತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್‌ ಅವರಿಗೆ ದೂರು ಸಲ್ಲಿಸಿದೆ.

ಜಾಲತಾಣದಲ್ಲಿ ಯೋಧರ ವಿರುದ್ಧವಾಗಿ ಹಾಗೂ ಪಾಕಿಸ್ತಾನದ ಪರವಾಗಿ ಪೋಸ್ಟ್‌ ಹಾಕಿರುವ ರಾಧಾಕೃಷ್ಣ ನಾಯಕ್‌ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರು ರಾಧಾಕೃಷ್ಣನ ಪರವಾಗಿ ಟ್ವಿಟರ್‌ನಲ್ಲಿ ಬೆಂಬಲ ಸೂಚಿಸಿರುವುದು ದೇಶದ್ರೋಹಿಗೆ ಬೆಂಬಲ ನೀಡಿದಂತಾಗಿದೆ. ಈ ಸಂಬಂಧ ದೇಶದ್ರೋಹಕ್ಕೆ ನೆರವು ಹಾಗೂ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT