<p><strong>ಉಡುಪಿ:</strong> ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಶೋಧ ಕಾರ್ಯ ನಡೆಸಿದ್ದಾರೆ.</p>.<p>‘ಎರಡು ಮನೆ ಮತ್ತು ವಿವಿಧ ಸರ್ವೆ ನಂಬರ್ಗಳಲ್ಲಿ ಮೂರು ನಿವೇಶನ, ಚಿನ್ನ, ಬೆಳ್ಳಿ, ಗೃಹೋಪಯೋಗಿ ವಸ್ತುಗಳು ಹಾಗೂ ಬ್ಯಾಂಕ್ ಖಾತೆಗಳ ಹಣ ಸೇರಿದಂತೆ ಒಟ್ಟು ₹2.21 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ಸುಮಾರು ಒಂದೂವರೆ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಮಂಜುನಾಥ ತಿಳಿಸಿದರು.</p>.<p>‘ಲಕ್ಷ್ಮೀನಾರಾಯಣ ಅವರ ಮನೆ, ಕಚೇರಿ, ಸಂಬಂಧಿಕರ ಮನೆ ಹಾಗೂ ಆಪ್ತರಾದ ರವಿ ಶೇರಿಗಾರ್ ಎಂಬುವವರ ಮನೆಗಳಲ್ಲೂ ಶೋಧಕಾರ್ಯ ನಡೆಸಲಾಗಿದೆ. ಐದು ತಂಡ ರಚಿಸಿ, ಐದು ಕಡೆಗಳಲ್ಲಿ ಶೋಧ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆ ಮುಂದುವರಿದಿದೆ’ ಎಂದಿದ್ದಾರೆ.</p>.<p>ಲಕ್ಷ್ಮೀನಾರಾಯಣ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. </p>.<p>ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಗಾನ ಪಿ. ಕುಮಾರ್, ಧನ್ಯಾ ನಾಯಕ್ ನೇತೃತ್ವದ ತಂಡ ಶೋಧಕಾರ್ಯ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಶೋಧ ಕಾರ್ಯ ನಡೆಸಿದ್ದಾರೆ.</p>.<p>‘ಎರಡು ಮನೆ ಮತ್ತು ವಿವಿಧ ಸರ್ವೆ ನಂಬರ್ಗಳಲ್ಲಿ ಮೂರು ನಿವೇಶನ, ಚಿನ್ನ, ಬೆಳ್ಳಿ, ಗೃಹೋಪಯೋಗಿ ವಸ್ತುಗಳು ಹಾಗೂ ಬ್ಯಾಂಕ್ ಖಾತೆಗಳ ಹಣ ಸೇರಿದಂತೆ ಒಟ್ಟು ₹2.21 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ಸುಮಾರು ಒಂದೂವರೆ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಮಂಜುನಾಥ ತಿಳಿಸಿದರು.</p>.<p>‘ಲಕ್ಷ್ಮೀನಾರಾಯಣ ಅವರ ಮನೆ, ಕಚೇರಿ, ಸಂಬಂಧಿಕರ ಮನೆ ಹಾಗೂ ಆಪ್ತರಾದ ರವಿ ಶೇರಿಗಾರ್ ಎಂಬುವವರ ಮನೆಗಳಲ್ಲೂ ಶೋಧಕಾರ್ಯ ನಡೆಸಲಾಗಿದೆ. ಐದು ತಂಡ ರಚಿಸಿ, ಐದು ಕಡೆಗಳಲ್ಲಿ ಶೋಧ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆ ಮುಂದುವರಿದಿದೆ’ ಎಂದಿದ್ದಾರೆ.</p>.<p>ಲಕ್ಷ್ಮೀನಾರಾಯಣ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. </p>.<p>ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಗಾನ ಪಿ. ಕುಮಾರ್, ಧನ್ಯಾ ನಾಯಕ್ ನೇತೃತ್ವದ ತಂಡ ಶೋಧಕಾರ್ಯ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>