ಹೆಬ್ರಿ: ಕರ್ನಾಟಕ ಲೋಕಾಯುಕ್ತ ಆದೇಶದ ಮೇರೆಗೆ ಇಲ್ಲಿನ ಸರ್ಕಾರಿ ಆಸ್ಪತ್ರೆ ಹಾಗೂ ಬಿಸಿಎಂ ಹಾಸ್ಟೆಲ್ಗಳಿಗೆ ಬುಧವಾರ ಲೋಕಾಯುಕ್ತ ಎಸ್ಪಿ ಸೈಮನ್ ಸಿ.ಎ. ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾಸ್ಟೆಲ್ಗಳಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಹರಿಸುವಂತೆ, ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡುವಂತೆ ಅವರು ಸೂಚಿಸಿದರು.
ಲೋಕಾಯುಕ್ತ ಡಿವೈಎಸ್ಪಿ ಕೆ.ಸಿ. ಪ್ರಕಾಶ್, ಇನ್ಸ್ಪೆಕ್ಟರ್ಗಳಾದ ರಫೀಕ್, ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ಆಸ್ಪತ್ರೆಯ ಸಿಬ್ಬಂದಿ ಇದ್ದರು.