<p><strong>ಬ್ರಹ್ಮಾವರ:</strong> ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ, ಬಿಲ್ಲಾಡಿ ಗ್ರಾಮ ಪಂಚಾಯಿತಿ, ವಂಡಾರು ಮದಗ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ 832ನೇ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ವಂಡಾರು ಮದಗಕೆರೆ ಹಸ್ತಾಂತರ ಕಾರ್ಯಕ್ರಮ ಭಾನುವಾರ ಬೋರ್ಡಗಲ್ಲು ಮದಗಕೆರೆ ಆವರಣದಲ್ಲಿ ನಡೆಯಿತು.</p>.<p>ಶಾಸಕ ಕಿರಣ್ ಕುಮಾರ್ ಕೊಡ್ಗಿ ನಾಮಫಲಕ ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಕೆರೆ ಹಸ್ತಾಂತರಿಸಿದರು. ವಂಡಾರು ಮದಗಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಉದ್ಯಮಿ ಮಹೇಶ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬ್ರಹ್ಮಾವರದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಬಿಲ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಬಾಯಿ, ಉದ್ಯಮಿಗಳಾದ ಡಿ.ಗೋಪಿನಾಥ್ ಕಾಮತ್, ಸಂಪತ್ ಶೆಟ್ಟಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ, ಬಿಲ್ಲಾಡಿ ಗ್ರಾಮ ಪಂಚಾಯಿತಿ, ವಂಡಾರು ಮದಗ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ 832ನೇ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ವಂಡಾರು ಮದಗಕೆರೆ ಹಸ್ತಾಂತರ ಕಾರ್ಯಕ್ರಮ ಭಾನುವಾರ ಬೋರ್ಡಗಲ್ಲು ಮದಗಕೆರೆ ಆವರಣದಲ್ಲಿ ನಡೆಯಿತು.</p>.<p>ಶಾಸಕ ಕಿರಣ್ ಕುಮಾರ್ ಕೊಡ್ಗಿ ನಾಮಫಲಕ ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಕೆರೆ ಹಸ್ತಾಂತರಿಸಿದರು. ವಂಡಾರು ಮದಗಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಉದ್ಯಮಿ ಮಹೇಶ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬ್ರಹ್ಮಾವರದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಬಿಲ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಬಾಯಿ, ಉದ್ಯಮಿಗಳಾದ ಡಿ.ಗೋಪಿನಾಥ್ ಕಾಮತ್, ಸಂಪತ್ ಶೆಟ್ಟಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>