‘ಕಾಂಗ್ರೆಸ್ ತೊರೆದಿದ್ದಕ್ಕೆ ಮಧ್ವರಾಜ್ ಪಶ್ಚಾತ್ತಾಪ ಪಡಲಿದ್ದಾರೆ’ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಶನಿವಾರ ತಿರುಗೇಟು ನೀಡಿದ ಅವರು ‘ಬಿಜೆಪಿ ಹಾಗೂ ಕಾಂಗ್ರೆಸ್ ಸಂಪ್ರದಾಯಗಳು ಬೇರೆ. ಕಾಂಗ್ರೆಸ್ ಪಕ್ಷದ ಸಮಾರಂಗಳಲ್ಲಿ ಎಲ್ಲರೂ ವೇದಿಕೆ ಹತ್ತುತ್ತಾರೆ. ಆದರೆ, ಬಿಜೆಪಿ ವೇದಿಕೆಗಳಲ್ಲಿ ಶಿಸ್ತು ಪಾಲನೆಯಾಗುತ್ತದೆ. ಕೆಲವರು ಮಾತ್ರ ವೇದಿಕೆಯಲ್ಲಿರುತ್ತಾರೆ. ಮಂತ್ರಿಗಳು, ಸಂಸದರು, ಶಾಸಕರು ಕೂಡ ಕೆಳಗೆ ಕೂರುತ್ತಾರೆ ಎಂದರು.