ಮಕ್ಕಳಿಲ್ಲದ ಅವರು ಪರ್ಕಳದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಸೈನ್ಯದಲ್ಲಿ 10 ವರ್ಷ ಸೇವೆಯ ನಂತರ ಲೋಕೋಪಯೋಗಿ ಇಲಾಖೆಗೆ ಸೇರಿ ಉಡುಪಿ ರಥಬೀದಿಯ ಕಾಂಕ್ರೀಟ್ ರಸ್ತೆ, ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಮಂಗಳೂರಿನ ಕೂಳೂರು ಸೇತುವೆ, ಮಲ್ಪೆ ಕಲ್ಮಾಡಿ ಸೇತುವೆ, ಬೈಂದೂರಿನ ಸೇತುವೆಗಳು, ಉಭಯ ಜಿಲ್ಲೆಗಳ ಅನೇಕ ಹಳೆಯ ಸೇತುವೆಗಳನ್ನು ನಿರ್ಮಿಸುವಾಗ ತಮ್ಮನ್ನು ತೊಡಗಿಸಿಕೊಂಡಿದ್ದರು. ಶತಾಯುಷಿ ಆಗಿದ್ದರೂ ಅವರ ಕಣ್ಣಿನ ದೃಷ್ಟಿ ಉತ್ತಮವಾಗಿತ್ತು. 2024ರ ತನಕ ಮಂಗಳೂರಿನ ಆರ್ಟಿಒ ಅವರಿಗೆ (ನಾಲ್ಕು ಚಕ್ರ) ವಾಹನ ಚಾಲನೆ ಪರವಾನಗಿ ನೀಡಿತ್ತು.