ಕಾರ್ಕಳ: ಸಿಡಿಲು ಬಡಿದು ವ್ಯಕ್ತಿ ಸಾವು

ಕಾರ್ಕಳ (ಉಡುಪಿ ಜಿಲ್ಲೆ): ತಾಲ್ಲೂಕಿನ ಹೊಸ್ಮಾರು ಜಾಣಮನೆಯ ಬಳಿ ಸೋಮವಾರ ಸಿಡಿಲು ಬಡಿದು ವಿಜಿತ್ (38) ಎಂಬುವವರು ಮೃತಪಟ್ಟಿದ್ದಾರೆ. ಮನೆಯ ಆವರಣದಲ್ಲಿದ್ದಾಗ ಏಕಾಏಕಿ ಸಿಡಿಲು ಅಪ್ಪಳಿಸಿ ಮೃತಪಟ್ಟಿದ್ದಾರೆ.
ಮೃತ ವಿಜಿತ್ ನಾಬಿರಾಜ ಹೆಗ್ಡೆ ಅವರ ಪುತ್ರ. ಕುಂದಾಪುರ, ಹೆಬ್ರಿ ಸೇರಿದಂತೆ ಹಲವಡೆ ಸೋಮವಾರ ಸಂಜೆ ಗುಡುಗು ಸಿಡಿಲು ಸಹಿತ ಬಿರುಸಿನ ಮಳೆ ಸುರಿದಿದ್ದು ಹಾನಿ ಸಂಭವಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.