<p><strong>ಕಾರ್ಕಳ:</strong> ಇಲ್ಲಿನ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಮುಖ್ಯ ರಸ್ತೆ ಬದಿಯಲ್ಲಿ ಮಂಗಳವಾರ ನಸುಕಿನ ವೇಳೆ ವ್ಯಕ್ತಿಯೊಬ್ಬರನ್ನು ಇರಿದು ಕೊಲೆ ಮಾಡಲಾಗಿದೆ.</p>.<p>ಕುಂಟಲ್ಪಾಡಿಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಮಂಗಳೂರಿನ ಪಡೀಲ್ ನಿವಾಸಿ ನವೀನ ಪೂಜಾರಿ (50) ಕೊಲೆಯಾದವರು.</p>.<p>ಈ ಸಂಬಂಧ ಕುಂಟಲ್ಪಾಡಿಯ ಧೂಪದಕಟ್ಟೆ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಪರೀಕ್ಷಿತ (44) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಕುಂಟಲ್ಪಾಡಿಯ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪರಿಶೀಲಿಸಿದಾಗ ಇರಿದು ಹತ್ಯೆ ಮಾಡಿರುವುದಾಗಿ ಕಂಡು ಬಂದಿದೆ. ಬಳಿಕ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿ ಆರೋಪಿ ಪರೀಕ್ಷಿತನನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.</p>.<p>‘ಆರೋಪಿ ಪರೀಕ್ಷಿತ ಮಂಗಳೂರಿನಲ್ಲಿ ಬಸ್ ಚಾಲಕನಾಗಿದ್ದು ಪತ್ನಿಗೆ ವಿಚ್ಚೇದನ ನೀಡಿ ಒಂಟಿಯಾಗಿ ವಾಸಿಸುತ್ತಿದ್ದ. ಕೊಲೆಯಾದ ನವೀನ ಪೂಜಾರಿ ಕೂಡ ಕಳೆದ ಮೂರ್ನಾಲ್ಕು ವರ್ಷಗಳಿಂದ ಹೆಂಡತಿ, ಮಕ್ಕಳಿಂದ ದೂರವಿದ್ದರು’ ಎಂದು ಹೇಳಿದ್ದಾರೆ.</p>.<p>‘ಪರೀಕ್ಷಿತನ ಸ್ನೇಹಿತೆಯೊಂದಿಗೆ ನವೀನ ಅವರು ಗೆಳೆತನ ಬೆಳೆಸಲು ಪ್ರಯತ್ನಿಸಿದ್ದರು. ಇದು ಆತನಿಗೆ ಇಷ್ಟವಿರಲಿಲ್ಲ. ಈ ಕಾರಣಕ್ಕೆ ವಾಗ್ವಾದ ನಡೆದು ನವೀನ ಅವರನ್ನು ಕೊಲೆ ಮಾಡಲಾಗಿದೆ’ ಎಂದೂ ತಿಳಿಸಿದರು.</p>.<p>ಹತ್ಯೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎಎಸ್ಪಿ ಹರ್ಷ ಪ್ರಿಯಂವದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ಇಲ್ಲಿನ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಮುಖ್ಯ ರಸ್ತೆ ಬದಿಯಲ್ಲಿ ಮಂಗಳವಾರ ನಸುಕಿನ ವೇಳೆ ವ್ಯಕ್ತಿಯೊಬ್ಬರನ್ನು ಇರಿದು ಕೊಲೆ ಮಾಡಲಾಗಿದೆ.</p>.<p>ಕುಂಟಲ್ಪಾಡಿಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಮಂಗಳೂರಿನ ಪಡೀಲ್ ನಿವಾಸಿ ನವೀನ ಪೂಜಾರಿ (50) ಕೊಲೆಯಾದವರು.</p>.<p>ಈ ಸಂಬಂಧ ಕುಂಟಲ್ಪಾಡಿಯ ಧೂಪದಕಟ್ಟೆ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಪರೀಕ್ಷಿತ (44) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಕುಂಟಲ್ಪಾಡಿಯ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪರಿಶೀಲಿಸಿದಾಗ ಇರಿದು ಹತ್ಯೆ ಮಾಡಿರುವುದಾಗಿ ಕಂಡು ಬಂದಿದೆ. ಬಳಿಕ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿ ಆರೋಪಿ ಪರೀಕ್ಷಿತನನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.</p>.<p>‘ಆರೋಪಿ ಪರೀಕ್ಷಿತ ಮಂಗಳೂರಿನಲ್ಲಿ ಬಸ್ ಚಾಲಕನಾಗಿದ್ದು ಪತ್ನಿಗೆ ವಿಚ್ಚೇದನ ನೀಡಿ ಒಂಟಿಯಾಗಿ ವಾಸಿಸುತ್ತಿದ್ದ. ಕೊಲೆಯಾದ ನವೀನ ಪೂಜಾರಿ ಕೂಡ ಕಳೆದ ಮೂರ್ನಾಲ್ಕು ವರ್ಷಗಳಿಂದ ಹೆಂಡತಿ, ಮಕ್ಕಳಿಂದ ದೂರವಿದ್ದರು’ ಎಂದು ಹೇಳಿದ್ದಾರೆ.</p>.<p>‘ಪರೀಕ್ಷಿತನ ಸ್ನೇಹಿತೆಯೊಂದಿಗೆ ನವೀನ ಅವರು ಗೆಳೆತನ ಬೆಳೆಸಲು ಪ್ರಯತ್ನಿಸಿದ್ದರು. ಇದು ಆತನಿಗೆ ಇಷ್ಟವಿರಲಿಲ್ಲ. ಈ ಕಾರಣಕ್ಕೆ ವಾಗ್ವಾದ ನಡೆದು ನವೀನ ಅವರನ್ನು ಕೊಲೆ ಮಾಡಲಾಗಿದೆ’ ಎಂದೂ ತಿಳಿಸಿದರು.</p>.<p>ಹತ್ಯೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎಎಸ್ಪಿ ಹರ್ಷ ಪ್ರಿಯಂವದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>