<p><strong>ಕುಂದಾಪುರ</strong>: ಸರ್ಕಾರದ ಮಾಂಗಲ್ಯ ಭಾಗ್ಯ ಯೋಜನೆ ಮೂಲಕ ಕೊಲ್ಲೂರಿನಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವ ದಂಪತಿಗಳ ಭವಿಷ್ಯದ ಜೀವನ ಉಜ್ವಲವಾಗಿರಲಿ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ ಹೇಳಿದರು.</p>.<p>ಕೊಲ್ಲೂರಿನ ಸ್ವರ್ಣಮುಖಿ ರಂಗಮಂದಿರದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>8 ಗ್ರಾಂ ಚಿನ್ನದ ಮಾಂಗಲ್ಯ, ವಧು-ವರರಿಗೆ ನಗದು, ಬಟ್ಟೆ ಸಹಿತ ₹ 75 ಸಾವಿರ ಮೌಲ್ಯದ ಉಡುಗೊರೆಗಳನ್ನು ದೇವಸ್ಥಾನದ ವತಿಯಿಂದ ನೀಡಲಾಗುತ್ತದೆ. ಮದುವೆ ಹಾಗೂ ಊಟೋಪಚಾರದ ಖರ್ಚು ದೇವಸ್ಥಾನದ ವತಿಯಿಂದಲೇ ನೀಡಲಾಗುತ್ತಿದೆ. ಬಡವರಿಗೆ ಹಾಗೂ ಅಪೇಕ್ಷಿತರಿಗೆ ಈ ಯೋಜನೆ ಉಪಯೋಗವಾಗಲಿ ಎಂದು ಪ್ರಚಾರ ನಡೆಸಿದ್ದರೂ, ನಿರೀಕ್ಷೆಯಷ್ಟು ಜೋಡಿ ಬಂದಿಲ್ಲ. ಈ ಕಾರ್ಯಕ್ರಮ ಇನ್ನಷ್ಟು ಜನರಿಗೆ ತಲುಪುವ ನಿಟ್ಟಿನಲ್ಲಿ ದೇವಸ್ಥಾನದ ವತಿಯಿಂದ ಮುಂದಿನ ದಿನಗಳಲ್ಲಿ ಯೋಜನೆ ಹಾಕಿಕೊಳ್ಳಲಾಗುವುದು ಎಂದರು.</p>.<p>ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ ದೇವಾಡಿಗ ಆಲೂರು ಮಾತನಾಡಿ, ದಾಂಪತ್ಯ ಜೀವನ ಆರಂಭಿಸಿರುವ ಜೋಡಿಗಳಲ್ಲಿ ಒಬ್ಬರು ವಿಶೇಷ ಚೇತನರು ಇರುವುದು ಖುಷಿ ತಂದಿದೆ. ಸರ್ಕಾರದ ಯೋಜನೆಗಳು ನೊಂದವರ ಬಾಳಿನಲ್ಲಿ ಬೆಳಕನ್ನು ತರುತ್ತದೆ ಎನ್ನುವುದಕ್ಕೆ ಇದಕ್ಕಿಂತ ಒಳ್ಳೆಯ ಉದಾಹರಣೆ ಬೇಕಿಲ್ಲ ಎಂದು ಹೇಳಿದರು.</p>.<p>ವ್ಯವಸ್ಥಾಪನಾ ಸಮಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುರೇಂದ್ರ ಶೆಟ್ಟಿ ಸಹನಾ ಗ್ರೂಪ್ಸ್, ಧನಾಕ್ಷಿ ವಿಶ್ವನಾಥ್ ಪೂಜಾರಿ, ಮಹಾಲಿಂಗ ನಾಯ್ಕ್, ಸುಧಾ ಕೆ. ಭಾಗವಹಿಸಿದ್ದರು.</p>.<p>ಕ್ಷೇತ್ರ ಪುರೋಹಿತ ಗಜಾನನ ಜೋಶಿ ವೇದಘೋಷ ಪಠಣ ಮಾಡಿದರು, ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿದರು, ಗಣಪತಿ ಭಟ್ ವಂದಿಸಿದರು.</p>.<p><strong>ನಾಲ್ಕು ಜೋಡಿಗೆ ಮಾಂಗಲ್ಯ ಭಾಗ್ಯ:</strong> ಕೃಷ್ಣ ಖಾರ್ವಿ ಉಪ್ಪುಂದ ಮತ್ತು ಕಲ್ಪನಾ ಖಾರ್ವಿ ನಾವುಂದ, ಮಂಜುನಾಥ ಖಾರ್ವಿ ಪಾಳ್ಯದವರ ತೊಪ್ಲು ತಾರಾಪತಿ ಮತ್ತು ಮಧುರಾ ಸರಪುರಹಿತ್ಲು ಬಿಜೂರು, ಆನಂದ ನಾಯ್ಕ್ ಹೆಗ್ಡೆಹಕ್ಲು ಕೊಲ್ಲೂರು ಮತ್ತು ಚಂದ್ರಾವತಿ ನಾಯ್ಕ್ ಖಾರ್ವಿಕೇರಿ ಕುಂದಾಪುರ ಹಾಗೂ ಮಂಜುನಾಥ ಕೋಟೇಶ್ವರ ಮತ್ತು ಅಶ್ವಿತಾ ಮಣೂರು ದಂಪತಿ ಸಪ್ತಪದಿ ತುಳಿದು ದಾಂಪತ್ಯ ಜೀವನ ಪ್ರವೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong>: ಸರ್ಕಾರದ ಮಾಂಗಲ್ಯ ಭಾಗ್ಯ ಯೋಜನೆ ಮೂಲಕ ಕೊಲ್ಲೂರಿನಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವ ದಂಪತಿಗಳ ಭವಿಷ್ಯದ ಜೀವನ ಉಜ್ವಲವಾಗಿರಲಿ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ ಹೇಳಿದರು.</p>.<p>ಕೊಲ್ಲೂರಿನ ಸ್ವರ್ಣಮುಖಿ ರಂಗಮಂದಿರದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>8 ಗ್ರಾಂ ಚಿನ್ನದ ಮಾಂಗಲ್ಯ, ವಧು-ವರರಿಗೆ ನಗದು, ಬಟ್ಟೆ ಸಹಿತ ₹ 75 ಸಾವಿರ ಮೌಲ್ಯದ ಉಡುಗೊರೆಗಳನ್ನು ದೇವಸ್ಥಾನದ ವತಿಯಿಂದ ನೀಡಲಾಗುತ್ತದೆ. ಮದುವೆ ಹಾಗೂ ಊಟೋಪಚಾರದ ಖರ್ಚು ದೇವಸ್ಥಾನದ ವತಿಯಿಂದಲೇ ನೀಡಲಾಗುತ್ತಿದೆ. ಬಡವರಿಗೆ ಹಾಗೂ ಅಪೇಕ್ಷಿತರಿಗೆ ಈ ಯೋಜನೆ ಉಪಯೋಗವಾಗಲಿ ಎಂದು ಪ್ರಚಾರ ನಡೆಸಿದ್ದರೂ, ನಿರೀಕ್ಷೆಯಷ್ಟು ಜೋಡಿ ಬಂದಿಲ್ಲ. ಈ ಕಾರ್ಯಕ್ರಮ ಇನ್ನಷ್ಟು ಜನರಿಗೆ ತಲುಪುವ ನಿಟ್ಟಿನಲ್ಲಿ ದೇವಸ್ಥಾನದ ವತಿಯಿಂದ ಮುಂದಿನ ದಿನಗಳಲ್ಲಿ ಯೋಜನೆ ಹಾಕಿಕೊಳ್ಳಲಾಗುವುದು ಎಂದರು.</p>.<p>ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ ದೇವಾಡಿಗ ಆಲೂರು ಮಾತನಾಡಿ, ದಾಂಪತ್ಯ ಜೀವನ ಆರಂಭಿಸಿರುವ ಜೋಡಿಗಳಲ್ಲಿ ಒಬ್ಬರು ವಿಶೇಷ ಚೇತನರು ಇರುವುದು ಖುಷಿ ತಂದಿದೆ. ಸರ್ಕಾರದ ಯೋಜನೆಗಳು ನೊಂದವರ ಬಾಳಿನಲ್ಲಿ ಬೆಳಕನ್ನು ತರುತ್ತದೆ ಎನ್ನುವುದಕ್ಕೆ ಇದಕ್ಕಿಂತ ಒಳ್ಳೆಯ ಉದಾಹರಣೆ ಬೇಕಿಲ್ಲ ಎಂದು ಹೇಳಿದರು.</p>.<p>ವ್ಯವಸ್ಥಾಪನಾ ಸಮಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುರೇಂದ್ರ ಶೆಟ್ಟಿ ಸಹನಾ ಗ್ರೂಪ್ಸ್, ಧನಾಕ್ಷಿ ವಿಶ್ವನಾಥ್ ಪೂಜಾರಿ, ಮಹಾಲಿಂಗ ನಾಯ್ಕ್, ಸುಧಾ ಕೆ. ಭಾಗವಹಿಸಿದ್ದರು.</p>.<p>ಕ್ಷೇತ್ರ ಪುರೋಹಿತ ಗಜಾನನ ಜೋಶಿ ವೇದಘೋಷ ಪಠಣ ಮಾಡಿದರು, ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿದರು, ಗಣಪತಿ ಭಟ್ ವಂದಿಸಿದರು.</p>.<p><strong>ನಾಲ್ಕು ಜೋಡಿಗೆ ಮಾಂಗಲ್ಯ ಭಾಗ್ಯ:</strong> ಕೃಷ್ಣ ಖಾರ್ವಿ ಉಪ್ಪುಂದ ಮತ್ತು ಕಲ್ಪನಾ ಖಾರ್ವಿ ನಾವುಂದ, ಮಂಜುನಾಥ ಖಾರ್ವಿ ಪಾಳ್ಯದವರ ತೊಪ್ಲು ತಾರಾಪತಿ ಮತ್ತು ಮಧುರಾ ಸರಪುರಹಿತ್ಲು ಬಿಜೂರು, ಆನಂದ ನಾಯ್ಕ್ ಹೆಗ್ಡೆಹಕ್ಲು ಕೊಲ್ಲೂರು ಮತ್ತು ಚಂದ್ರಾವತಿ ನಾಯ್ಕ್ ಖಾರ್ವಿಕೇರಿ ಕುಂದಾಪುರ ಹಾಗೂ ಮಂಜುನಾಥ ಕೋಟೇಶ್ವರ ಮತ್ತು ಅಶ್ವಿತಾ ಮಣೂರು ದಂಪತಿ ಸಪ್ತಪದಿ ತುಳಿದು ದಾಂಪತ್ಯ ಜೀವನ ಪ್ರವೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>