<p><strong>ಉಡುಪಿ</strong>: ಪ್ರಸಕ್ತ ವರ್ಷ ಮಾಹೆಯು ಸಂಶೋಧನೆ ಮತ್ತು ಅಭಿವೃದ್ಧಿಗೆ ₹365 ಕೋಟಿ ಹೂಡಿಕೆ ಮಾಡಲಿದೆ ಎಂದು ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ. ವೆಂಕಟೇಶ್ ಹೇಳಿದರು.</p>.<p>ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮಣಿಪಾಲದಲ್ಲಿ ಸೋಮವಾರ ಆರಂಭಗೊಂಡ ಮಣಿಪಾಲ ಸ್ಟಾರ್ಟ್ ಅಪ್ ಎಕ್ಸ್ಪೋದಲ್ಲಿ ಅವರು ಮಾತನಾಡಿದರು.</p>.<p>ಐಐಟಿ ದೆಹಲಿ, ಐಐಟಿ ಮದ್ರಾಸ್, ಫಿಲಿಪ್ಸ್, ಎಂಐಟಿ, ಕೆಎಂಸಿ ಹಾಗೂ ಮಣಿಪಾಲ ಆಸ್ಪತ್ರೆಗಳೊಂದಿಗೆ ಮಾಹೆಯ ಸಹ ಪಾಲುದಾರತ್ವದ ಕುರಿತು ಅವರು ವಿವರಿಸಿದರು.</p>.<p>ಬಿಐಆರ್ಎಸಿ ಇಂಕ್ಯುಬೇಶನ್ ಅಧಿಕಾರಿ ಅಪೂರ್ವಾ ಶ್ರೀವಾಸ್ತವ ಮಾತನಾಡಿ, ಸಂಶೋಧನೆಯಿಂದ ವ್ಯಾಪಾರೀಕರಣದವರೆಗೆ ಮಾಹೆ ಅನುಸರಿಸಿರುವ ಸಮಗ್ರ ಕ್ರಮವು ಭಾರತವನ್ನು ಜಾಗತಿಕ ಬಯೋಟೆಕ್ ಹಬ್ ಆಗಿ ರೂಪಿಸಲು ನಮ್ಮ ರಾಷ್ಟ್ರೀಯ ಗುರಿಗೆ ಸಂಪೂರ್ಣ ಹೊಂದಿಕೊಳ್ಳುತ್ತದೆ ಎಂದು ಹೇಳಿದರು.</p>.<p>ಎಕ್ಸ್ಪೋದಲ್ಲಿ ವಿವಿಧ ಕ್ಷೇತ್ರಗಳ ಪರಿಣತ ತಜ್ಞರಿಂದ ಉಪನ್ಯಾಸಗಳ ಸರಣಿ ನಡೆಯಿತು. ಡಾ.ಕೆ. ಮೋಹನ್ ವೇಲು ಮಾತನಾಡಿದರು. ಡಾ. ರಾಜಕುಮಾರ್ ಆಳಂದ್, ಸಂಕೀರ್ಣ ಪೈ, ಡಾ. ಮನೇಶ್ ಥಾಮಸ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಪ್ರಸಕ್ತ ವರ್ಷ ಮಾಹೆಯು ಸಂಶೋಧನೆ ಮತ್ತು ಅಭಿವೃದ್ಧಿಗೆ ₹365 ಕೋಟಿ ಹೂಡಿಕೆ ಮಾಡಲಿದೆ ಎಂದು ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ. ವೆಂಕಟೇಶ್ ಹೇಳಿದರು.</p>.<p>ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮಣಿಪಾಲದಲ್ಲಿ ಸೋಮವಾರ ಆರಂಭಗೊಂಡ ಮಣಿಪಾಲ ಸ್ಟಾರ್ಟ್ ಅಪ್ ಎಕ್ಸ್ಪೋದಲ್ಲಿ ಅವರು ಮಾತನಾಡಿದರು.</p>.<p>ಐಐಟಿ ದೆಹಲಿ, ಐಐಟಿ ಮದ್ರಾಸ್, ಫಿಲಿಪ್ಸ್, ಎಂಐಟಿ, ಕೆಎಂಸಿ ಹಾಗೂ ಮಣಿಪಾಲ ಆಸ್ಪತ್ರೆಗಳೊಂದಿಗೆ ಮಾಹೆಯ ಸಹ ಪಾಲುದಾರತ್ವದ ಕುರಿತು ಅವರು ವಿವರಿಸಿದರು.</p>.<p>ಬಿಐಆರ್ಎಸಿ ಇಂಕ್ಯುಬೇಶನ್ ಅಧಿಕಾರಿ ಅಪೂರ್ವಾ ಶ್ರೀವಾಸ್ತವ ಮಾತನಾಡಿ, ಸಂಶೋಧನೆಯಿಂದ ವ್ಯಾಪಾರೀಕರಣದವರೆಗೆ ಮಾಹೆ ಅನುಸರಿಸಿರುವ ಸಮಗ್ರ ಕ್ರಮವು ಭಾರತವನ್ನು ಜಾಗತಿಕ ಬಯೋಟೆಕ್ ಹಬ್ ಆಗಿ ರೂಪಿಸಲು ನಮ್ಮ ರಾಷ್ಟ್ರೀಯ ಗುರಿಗೆ ಸಂಪೂರ್ಣ ಹೊಂದಿಕೊಳ್ಳುತ್ತದೆ ಎಂದು ಹೇಳಿದರು.</p>.<p>ಎಕ್ಸ್ಪೋದಲ್ಲಿ ವಿವಿಧ ಕ್ಷೇತ್ರಗಳ ಪರಿಣತ ತಜ್ಞರಿಂದ ಉಪನ್ಯಾಸಗಳ ಸರಣಿ ನಡೆಯಿತು. ಡಾ.ಕೆ. ಮೋಹನ್ ವೇಲು ಮಾತನಾಡಿದರು. ಡಾ. ರಾಜಕುಮಾರ್ ಆಳಂದ್, ಸಂಕೀರ್ಣ ಪೈ, ಡಾ. ಮನೇಶ್ ಥಾಮಸ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>