<p><strong>ಕಾಪು (ಪಡುಬಿದ್ರಿ):</strong> ‘ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಶಿಲೆ ಮತ್ತು ಮರದ ಕೆತ್ತನೆ ಅದ್ಭುತವಾಗಿ ಮೂಡಿಬಂದಿದೆ. ಧಾರ್ಮಿಕ ಕ್ಷೇತ್ರಗಳು ಈ ರೀತಿ ಅಭಿವೃದ್ಧಿಯಾಗಬೇಕು’ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎಂಟನೇ ದಿನವಾದ ಮಂಗಳವಾರ ನಡೆದ ಉಚ್ಚಂಗಿ ಬ್ರಹ್ಮಕಲಶಾಭಿಷೇಕದಲ್ಲಿ ಅವರು ಮಾತನಾಡಿದರು.</p>.<p>‘ಶ್ರದ್ಧೆ, ಭಕ್ತಿಯಿಂದ ಮಾಡಿದ ಯಾವುದೇ ಕಾರ್ಯವೂ ಯಶಸ್ವಿಯಾಗುತ್ತದೆ. ಇಲ್ಲಿ ನಡೆದ ಕಾರ್ಯದಲ್ಲೂ ಶ್ರದ್ಧೆ ಮತ್ತು ಭಕ್ತಿ ತುಂಬಿದೆ. ಕ್ಷೇತ್ರದ ಅಭಿವೃದ್ಧಿಯಿಂದ ನಾಡಿನ ಅಭಿವೃದ್ಧಿ ಸಾಧ್ಯ’ ಎಂದರು.</p>.<p>ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಹೇಶ್ ಕೋಟ್ಯನ್, ವಿಶ್ವನಾಥ್ಮ, ಯೋಗೀಶ್ ಶೆಟ್ಟಿ, ದಿವಾಕರ ಶೆಟ್ಟಿ, ಅನಿಲ್ ಬಳ್ಳಾಲ್, ಹರಿಯಪ್ಪ ಕೋಟ್ಯಾನ್, ಮಾಧವ ಅರ್.ಪಾಲನ್, ಶಶಿಧರ ಶಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು (ಪಡುಬಿದ್ರಿ):</strong> ‘ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಶಿಲೆ ಮತ್ತು ಮರದ ಕೆತ್ತನೆ ಅದ್ಭುತವಾಗಿ ಮೂಡಿಬಂದಿದೆ. ಧಾರ್ಮಿಕ ಕ್ಷೇತ್ರಗಳು ಈ ರೀತಿ ಅಭಿವೃದ್ಧಿಯಾಗಬೇಕು’ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎಂಟನೇ ದಿನವಾದ ಮಂಗಳವಾರ ನಡೆದ ಉಚ್ಚಂಗಿ ಬ್ರಹ್ಮಕಲಶಾಭಿಷೇಕದಲ್ಲಿ ಅವರು ಮಾತನಾಡಿದರು.</p>.<p>‘ಶ್ರದ್ಧೆ, ಭಕ್ತಿಯಿಂದ ಮಾಡಿದ ಯಾವುದೇ ಕಾರ್ಯವೂ ಯಶಸ್ವಿಯಾಗುತ್ತದೆ. ಇಲ್ಲಿ ನಡೆದ ಕಾರ್ಯದಲ್ಲೂ ಶ್ರದ್ಧೆ ಮತ್ತು ಭಕ್ತಿ ತುಂಬಿದೆ. ಕ್ಷೇತ್ರದ ಅಭಿವೃದ್ಧಿಯಿಂದ ನಾಡಿನ ಅಭಿವೃದ್ಧಿ ಸಾಧ್ಯ’ ಎಂದರು.</p>.<p>ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಹೇಶ್ ಕೋಟ್ಯನ್, ವಿಶ್ವನಾಥ್ಮ, ಯೋಗೀಶ್ ಶೆಟ್ಟಿ, ದಿವಾಕರ ಶೆಟ್ಟಿ, ಅನಿಲ್ ಬಳ್ಳಾಲ್, ಹರಿಯಪ್ಪ ಕೋಟ್ಯಾನ್, ಮಾಧವ ಅರ್.ಪಾಲನ್, ಶಶಿಧರ ಶಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>