ಉಡುಪಿಗೆ ಜಿಲ್ಲೆಯ ಬೇಡಿಕೆಯ ಬಹುತೇಕ ಪಾಲು ಹೊರ ಜಿಲ್ಲೆಗಳಿಂದ ಪೂರೈಕೆಯಾಗುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಿಂದ ಜಿಲ್ಲೆಗೆ ತರಕಾರಿ ಪೂರೈಕೆಯಾಗುತ್ತದೆ. ಮೇಲಿನ ಜಿಲ್ಲೆಗಳಲ್ಲಿ ನೆರೆ ಬಂದು ತರಕಾರಿ ಹಾಳಾದರೆ ದರ ಹೆಚ್ಚಾಗುತ್ತದೆ. ಮಳೆ ಹದವಾಗಿದ್ದರೆ ತರಕಾರಿ ದರ ಇಳಿಕೆಯಾಗುತ್ತದೆ ಎನ್ನುತ್ತಾರೆ ವ್ಯಾಪಾರಿಗಳು.