ಘಟನೆಯ ವಿವರ : 2015ರಲ್ಲಿ ಬೈಂದೂರು ತಾಲ್ಲೂಕಿನ ತೆಗ್ಗರ್ಸೆಯ ಅರಳಿಕಟ್ಟೆಯ ನಿವಾಸಿ ಕುಶಲ ಶೆಟ್ಟಿಯವರ ಮಗನ ಮದುವೆ ಸಮಾರಂಭ ಉಪ್ಪುಂದದ ಸಭಾಗೃಹದಲ್ಲಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರೊಂದಿಗೆ ಇದ್ದ ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಬೈಂದೂರು ತೆಗ್ಗರ್ಸೆಯ ಅರಳಿಕಟ್ಟೆ ನಿವಾಸಿಗಳಾದ ರಾಜೇಶ್ ಶೆಟ್ಟಿ ಯಾನೆ ರಾಜೇಂದ್ರ (35) ಹಾಗೂ ರಾಘವೇಂದ್ರ ಶೆಟ್ಟಿ(33) ಎನ್ನುವವರು ಕುಶಲ ಶೆಟ್ಟಿಯ ಮನೆಗೆ ಬೆಂಕಿ ಹಚ್ಚಿದ್ದರು ಎಂದು ಪ್ರಕರಣ ದಾಖಲಾಗಿತ್ತು.