ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮನು ಹಂದಾಡಿ ಅವರನ್ನು ಸನ್ಮಾನಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ರಂಗನಕೆರೆಯ ಉದ್ಯಮಿ ಶ್ರೀನಿವಾಸ ಶೆಟ್ಟಿಗಾರ್, ಬಾರ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಶಾಂತರಾಮ ಶೆಟ್ಟಿ, ಏಕನಾಥೇಶ್ವರಿ ದೇವಸ್ಥಾನದ ಉಪಾಧ್ಯಕ್ಷ ಬಾರ್ಕುರು ಜನಾರ್ದನ ದೇವಾಡಿಗ, ಕೂಡ್ಲಿ ಜನಾರ್ದನ ದೇವಸ್ಥಾನದ ಮೊಕ್ತೇಸರ ಶ್ರೀನಿವಾಸ ಉಡುಪ, ಬಾರ್ಕೂರು ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಬಾರ್ಕೂರು ಶಿವಗಿರಿ ಕ್ಷೇತ್ರದ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಸರ್ವೋತ್ತಮ ಪೂಜಾರಿ, ಬಾರ್ಕೂರು ವಲಯದ ಅಧ್ಯಕ್ಷ ಗೌರಿ.ವಿ.ಪೂಜಾರಿ ಇದ್ದರು.