ಈಗಾಗಲೇ ಶಿವಮೊಗ್ಗ, ಬೆಂಗಳೂರಿನಲ್ಲಿ ಮತ್ಸ್ಯದರ್ಶಿನಿ ಖಾದ್ಯಗಳಿಗೆ ಬೇಡಿಕೆ ಹೆಚ್ಚಿದೆ. ಈಗ ಮೈಸೂರು, ಬೆಳಗಾವಿ, ತುಮಕೂರು, ಉಡುಪಿ, ಮಂಗಳೂರು, ಹುಬ್ಬಳ್ಳಿ–ಧಾರವಾಡ, ಕಲಬುರಗಿ, ವಿಜಯಪುರ, ಬೆಂಗಳೂರು ಉತ್ತರ ಕನ್ನಡದಲ್ಲಿ ಮತ್ಸ್ಯದರ್ಶಿನಿ ತೆರೆಯಲಾಗುವುದು. ಯೋಜನೆಯ ಯಶಸ್ಸು ಆಧರಿಸಿ ಮುಂದಿನ ವರ್ಷ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು.