ಕಲ್ಯಾಣಪುರದ ಮೂಡುಕುದ್ರುವಿನಲ್ಲಿ ಶುಕ್ರವಾರ ‘ಕಡಲು’ ಆ್ಯಪ್ ಬಿಡುಗಡೆ ಹಾಗೂ ಪಂಜರ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಈಚೆಗೆ ಕೆಎಫ್ಡಿಸಿ ಅಧಿಕಾರಿಗಳು ದೆಹಲಿಯಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಒಪ್ಪಂದ ಮಾಡಿಕೊಂಡಿದ್ದು, ಕೆಎಫ್ಡಿಸಿಯಲ್ಲಿ ನೂರಾರು ಕೋಟಿ ವ್ಯವಹಾರ ನಡೆಯುವ ವಿಶ್ವಾಸವಿದೆ ಎಂದರು.