ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅಖಂಡ ಹಿಂದೂ ಧರ್ಮದ ಶ್ರೇಷ್ಠ ಸನ್ಯಾಸಿ, ದೀಕ್ಷೆ ಸ್ವೀಕರಿಸಿ 80 ವರ್ಷಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸ್ವತಃ ರಾಷ್ಟ್ರಪತಿಗಳೇ ಉಡುಪಿಗೆ ಬಂದು ಗೌರವಿಸುತ್ತಿದ್ದಾರೆ. ಇದು ದೇಶದ ಕಾರ್ಯಕ್ರಮವಾಗಿದೆ. ಇಂತಹ ಸಂದರ್ಭದಲ್ಲಿ ದಿನೇಶ್ ಅಮೀನ್ ಮಟ್ಟು ಅವರು ನೀಡಿರುವ ಹೇಳಿಕೆಯಿಂದ ಇಡೀ ಹಿಂದೂ ಧರ್ಮಕ್ಕೆ ನೋವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.