ರೈತರು ಬೆಳೆದ ಕಲ್ಲಂಗಡಿ, ಮಟ್ಟುಗುಳ್ಳ, ಅನಾನಸ್ ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳನ್ನು ಸಾಗಿಸಲು ವ್ಯವಸ್ಥೆ ಮಾಡಲಾಗಿದೆ. ಕೀಟನಾಶಕ, ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಭತ್ತದ ಕಟಾವು ನಡೆಯುತ್ತಿದ್ದು, ಎಪಿಎಂಸಿ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.