<p><strong>ಉಡುಪಿ</strong>: ಜಿಲ್ಲೆಯಲ್ಲಿ ಕೋವಿಡ್ ಹಾಗೂ ಸಂಬಂಧಿತ ಲಕ್ಷಣಗಳಿರುವ ರೋಗಿಗಳ ಚಿಕಿತ್ಸೆಗಾಗಿ ಹೆಚ್ಚುವರಿಯಾಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಹೆಚ್ಚಿಸಲಾಗುವುದು. ಇದಕ್ಕಾಗಿ ಅಗತ್ಯ ವೈದ್ಯರು, ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಹೇಳಿದರು.</p>.<p>ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಆಸ್ಪತ್ರೆಗಳಲ್ಲಿ 2,500 ಹೆಚ್ಚುವರಿ ಹಾಸಿಗೆಗಳ ಸೌಲಭ್ಯಕ್ಕೆ ಸೂಚಿಸಿದೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಜಿಲ್ಲಾಧಿಕಾರಿ ಪ್ರಸ್ತಾವನೆಗ ಸಲ್ಲಿಸಿದರೆ ಸರ್ಕಾರ ಅನುಮತಿ ನೀಡಲಿದೆ ಎಂದರು.</p>.<p>ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲಾಗುವ ಉಪಕರಣಗಳ ಕಾರ್ಯಕ್ಷಮತೆ ಹಾಗೂ ಸಿಬ್ಬಂದಿ ತರಬೇತಿ ಬಗ್ಗೆ ಜಿಲ್ಲಾಧಿಕಾರಿ ಗಮನ ಹರಿಸಬೇಕು. ತಾಲ್ಲೂಕು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ವೆಂಟಿಲೇಟರ್ ಸೌಲಭ್ಯದ ವ್ಯವಸ್ಥೆ ಮಾಡಬೇಕು ಹಾಗೂ ಹೆಚ್ಚುವರಿಯಾಗಿ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.</p>.<p>ಹೊರರಾಜ್ಯದಿಂದ ಬಂದವರ ಸಂಪೂರ್ಣ ಮಾಹಿತಿ ಆಯಾ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳಲ್ಲಿ ಇರಬೇಕು. ಅವರ ಕ್ವಾರೆಂಟೈನ್ ಅವಧಿಯ ಮೇಲೆ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪ್ರಯೋಗಾಲಯದ ಕಾಮಗಾರಿ ಅಂತಿಮ ಹಂತದಲ್ಲಿದ್ದು, 2-3 ದಿನಗಳೊಳಗೆ ಪೂರ್ಣಗೊಳ್ಳಲಿದೆ. ಬಳಿಕ ಪ್ರಯೋಗಾಲಯದಲ್ಲಿ ಅಗತ್ಯ ಉಪಕರಣಗಳ ಅಳವಡಿಕೆ ಮಾಡಲಾಗುವುದು. ಶೀಘ್ರವೇ ಗಂಟಲ ದ್ರವ ಪರೀಕ್ಷೆ ಉಡುಪಿಯಲ್ಲಿಯೇ ನಡೆಯಲಿದೆ ಎಂದು ಡಿಸಿ ಜಗದೀಶ್ ತಿಳಿಸಿದರು.</p>.<p><strong>ಬ್ಯಾಂಕರ್ಗಳ ಸಭೆ:</strong>ಕೋವಿಡ್–19 ಸೋಂಕು ಹಿನ್ನೆಲೆಯಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಹಣಕಾಸು ನೆರವು ಯೋಜನೆ ಜಾರಿಗೆ ಜಿಲ್ಲೆಯಲ್ಲಿ ಕೆಲವು ಖಾಸಗಿ ಬ್ಯಾಂಕುಗಳು ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ದೂರುಗಳಿವೆ. ಈ ಬಗ್ಗೆ ಜಿಲ್ಲೆಯ ಬ್ಯಾಂಕುಗಳ ಜತೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಸೂಚಿಸಿದರು.</p>.<p>ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಭಾಗಶಃ ಹಾನಿಗೊಳಗಾದ ಮನೆಗಳನ್ನು ಪುನರ್ನಿಮಾಣ ಮಾಡಲು ಅನುದಾನ ಬಿಡುಗಡೆ ವಿಳಂಬದಿಂದ ಕೆಲವೆಡೆ ಮನೆ ನಿರ್ಮಾಣ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದರು.</p>.<p>ಜಿಲ್ಲೆಯಲ್ಲಿ ಕೃಷಿ ಬಿತ್ತನೆ ಬೀಜಕ್ಕೆ ಹೆಚ್ಚು ಬೇಡಿಕೆ ಬರುತ್ತಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿ ಕಂಡುಬಂದಿದೆ. ಜಿಲ್ಲೆಯ ಕೆಲವೆಡೆ ಈಗಾಗಲೇ ಬಿತ್ತನೆ ಚಟುವಟಿಕೆ ಆರಂಭಗೊಂಡಿದೆ ಎಂದು ಕೃಷಿ ಜಂಟಿ ನಿರ್ದೇಶಕ ಕೆಂಪೇಗೌಡ ಸಭೆಗೆ ತಿಳಿಸಿದರು.</p>.<p>ರಾಜ್ಯ ಸರ್ಕಾರ ಹೂ ಬೆಳೆಗಾರರಿಗೆ ಪರಿಹಾರ ನೀಡುವ ಯೋಜನೆಯಲ್ಲಿ ಜಿಲ್ಲೆಯಲ್ಲಿ 4,333 ರೈತರು ಅರ್ಜಿ ಸಲ್ಲಿಸಿದ್ದಾರೆ. ಗರಿಷ್ಠ 2.5 ಎಕರೆಗೆ ₹25,000 ಪರಿಹಾರ ದೊರಕಲಿದೆ. ಇದರೊಂದಿಗೆ ತರಕಾರಿ, ಹಣ್ಣು ಬೆಳೆಗಾರರಿಗೆ ಪರಿಹಾರ ನೀಡಲು ಹೊಸದಾಗಿ ಮಾರ್ಗಸೂಚಿ ಬಂದಿದ್ದು, ಜಿಲ್ಲೆಯಲ್ಲಿ ಕಲ್ಲಂಗಡಿ ಹಾಗೂ ಅನಾನಸು ಬೆಳೆಗಾರರಿಗೆ ಪರಿಹಾರ ದೊರೆಯಲಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಜಿಲ್ಲೆಯಲ್ಲಿ ಕೋವಿಡ್ ಹಾಗೂ ಸಂಬಂಧಿತ ಲಕ್ಷಣಗಳಿರುವ ರೋಗಿಗಳ ಚಿಕಿತ್ಸೆಗಾಗಿ ಹೆಚ್ಚುವರಿಯಾಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಹೆಚ್ಚಿಸಲಾಗುವುದು. ಇದಕ್ಕಾಗಿ ಅಗತ್ಯ ವೈದ್ಯರು, ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಹೇಳಿದರು.</p>.<p>ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಆಸ್ಪತ್ರೆಗಳಲ್ಲಿ 2,500 ಹೆಚ್ಚುವರಿ ಹಾಸಿಗೆಗಳ ಸೌಲಭ್ಯಕ್ಕೆ ಸೂಚಿಸಿದೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಜಿಲ್ಲಾಧಿಕಾರಿ ಪ್ರಸ್ತಾವನೆಗ ಸಲ್ಲಿಸಿದರೆ ಸರ್ಕಾರ ಅನುಮತಿ ನೀಡಲಿದೆ ಎಂದರು.</p>.<p>ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲಾಗುವ ಉಪಕರಣಗಳ ಕಾರ್ಯಕ್ಷಮತೆ ಹಾಗೂ ಸಿಬ್ಬಂದಿ ತರಬೇತಿ ಬಗ್ಗೆ ಜಿಲ್ಲಾಧಿಕಾರಿ ಗಮನ ಹರಿಸಬೇಕು. ತಾಲ್ಲೂಕು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ವೆಂಟಿಲೇಟರ್ ಸೌಲಭ್ಯದ ವ್ಯವಸ್ಥೆ ಮಾಡಬೇಕು ಹಾಗೂ ಹೆಚ್ಚುವರಿಯಾಗಿ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.</p>.<p>ಹೊರರಾಜ್ಯದಿಂದ ಬಂದವರ ಸಂಪೂರ್ಣ ಮಾಹಿತಿ ಆಯಾ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳಲ್ಲಿ ಇರಬೇಕು. ಅವರ ಕ್ವಾರೆಂಟೈನ್ ಅವಧಿಯ ಮೇಲೆ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪ್ರಯೋಗಾಲಯದ ಕಾಮಗಾರಿ ಅಂತಿಮ ಹಂತದಲ್ಲಿದ್ದು, 2-3 ದಿನಗಳೊಳಗೆ ಪೂರ್ಣಗೊಳ್ಳಲಿದೆ. ಬಳಿಕ ಪ್ರಯೋಗಾಲಯದಲ್ಲಿ ಅಗತ್ಯ ಉಪಕರಣಗಳ ಅಳವಡಿಕೆ ಮಾಡಲಾಗುವುದು. ಶೀಘ್ರವೇ ಗಂಟಲ ದ್ರವ ಪರೀಕ್ಷೆ ಉಡುಪಿಯಲ್ಲಿಯೇ ನಡೆಯಲಿದೆ ಎಂದು ಡಿಸಿ ಜಗದೀಶ್ ತಿಳಿಸಿದರು.</p>.<p><strong>ಬ್ಯಾಂಕರ್ಗಳ ಸಭೆ:</strong>ಕೋವಿಡ್–19 ಸೋಂಕು ಹಿನ್ನೆಲೆಯಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಹಣಕಾಸು ನೆರವು ಯೋಜನೆ ಜಾರಿಗೆ ಜಿಲ್ಲೆಯಲ್ಲಿ ಕೆಲವು ಖಾಸಗಿ ಬ್ಯಾಂಕುಗಳು ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ದೂರುಗಳಿವೆ. ಈ ಬಗ್ಗೆ ಜಿಲ್ಲೆಯ ಬ್ಯಾಂಕುಗಳ ಜತೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಸೂಚಿಸಿದರು.</p>.<p>ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಭಾಗಶಃ ಹಾನಿಗೊಳಗಾದ ಮನೆಗಳನ್ನು ಪುನರ್ನಿಮಾಣ ಮಾಡಲು ಅನುದಾನ ಬಿಡುಗಡೆ ವಿಳಂಬದಿಂದ ಕೆಲವೆಡೆ ಮನೆ ನಿರ್ಮಾಣ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದರು.</p>.<p>ಜಿಲ್ಲೆಯಲ್ಲಿ ಕೃಷಿ ಬಿತ್ತನೆ ಬೀಜಕ್ಕೆ ಹೆಚ್ಚು ಬೇಡಿಕೆ ಬರುತ್ತಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿ ಕಂಡುಬಂದಿದೆ. ಜಿಲ್ಲೆಯ ಕೆಲವೆಡೆ ಈಗಾಗಲೇ ಬಿತ್ತನೆ ಚಟುವಟಿಕೆ ಆರಂಭಗೊಂಡಿದೆ ಎಂದು ಕೃಷಿ ಜಂಟಿ ನಿರ್ದೇಶಕ ಕೆಂಪೇಗೌಡ ಸಭೆಗೆ ತಿಳಿಸಿದರು.</p>.<p>ರಾಜ್ಯ ಸರ್ಕಾರ ಹೂ ಬೆಳೆಗಾರರಿಗೆ ಪರಿಹಾರ ನೀಡುವ ಯೋಜನೆಯಲ್ಲಿ ಜಿಲ್ಲೆಯಲ್ಲಿ 4,333 ರೈತರು ಅರ್ಜಿ ಸಲ್ಲಿಸಿದ್ದಾರೆ. ಗರಿಷ್ಠ 2.5 ಎಕರೆಗೆ ₹25,000 ಪರಿಹಾರ ದೊರಕಲಿದೆ. ಇದರೊಂದಿಗೆ ತರಕಾರಿ, ಹಣ್ಣು ಬೆಳೆಗಾರರಿಗೆ ಪರಿಹಾರ ನೀಡಲು ಹೊಸದಾಗಿ ಮಾರ್ಗಸೂಚಿ ಬಂದಿದ್ದು, ಜಿಲ್ಲೆಯಲ್ಲಿ ಕಲ್ಲಂಗಡಿ ಹಾಗೂ ಅನಾನಸು ಬೆಳೆಗಾರರಿಗೆ ಪರಿಹಾರ ದೊರೆಯಲಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>