ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್.ನಾಯಕ್ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ನಾಲ್ವರು ಮಹನೀಯರಾದ ಗಾಂಧೀಜಿ, ಅಂಬೇಡ್ಕರ್, ಬಸವಣ್ಣ ಹಾಗೂ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳಿಗೆ ಮಹತ್ವವಿದೆ. ಗಾಂಧೀಜಿಯ ಸತ್ಯ–ಅಹಿಂಸೆ, ಅಂಬೇಡ್ಕರ್ ಅವರ ಸಮಾನತೆ, ಬಸವಣ್ಣನವರ ಕಾಯಕ ಹಾಗೂ ಸ್ವಾಮಿ ವಿವೇಕಾನಂದರ ದೇಶಭಕ್ತಿ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ಈ ನಾಲ್ವರು ದಾರ್ಶನಿಕರ ವಿಚಾರಗಳಿಗೆ ಸಾವಿಲ್ಲ; ಜೀವನದ ಎಲ್ಲ ಸಮಸ್ಯೆಗಳಿಗೂ ಉತ್ತರ ಕಂಡುಕೊಳ್ಳಲು ಸಾಧ್ಯ ಎಂದರು