ಉಡುಪಿ: ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಬಂಧನೆಗೊಳಪಟ್ಟು ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಮೈಕ್ ಬಳಸಲು ಅವಕಾಶವಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಸೋಮವಾರ ಬೈಂದೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು, ಪರವಾನಗಿ ಪಡೆದು ಧ್ವನಿವರ್ಧಕಗಳನ್ನು ಬಳಸಬಹುದು. ಆದರೆ, 50 ಅಡಿಗೂ ಎತ್ತರದಲ್ಲಿ ಮೈಕ್ಗಳನ್ನು ಅಳವಡಿಸುವಂತಿಲ್ಲ ಎಂದರು.
ಹಲಾಲ್, ಜಟ್ಕಾ ವಿಚಾರದಲ್ಲಿ ಸರ್ಕಾರದ ನಿಲುವಿಗಿಂತ ಸಾರ್ವಜನಿಕರ ನಿಲುವು ಮುಖ್ಯ. ಹಲಾಲ್ ಬೇಕೋ, ಜಟ್ಕಾ ಬೇಕೋ ಎಂಬುದನ್ನು ಜನರೇ ನಿರ್ಧರಿಸಬೇಕು. ಸರ್ಕಾರ ಮಧ್ಯೆ ಪ್ರವೇಶಿಸುವುದು ಸರಿಯಲ್ಲ ಎಂದರು.
ಹಲಾಲ್, ಜಟ್ಕಾ ವಿವಾದದಲ್ಲಿ ಕಾಂಗ್ರೆಸ್ ತನ್ನ ತಪ್ಪನ್ನು ಮರೆಮಾಚಲು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಟೀಕಿಸಿದರು.