ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Last Updated 13 ಸೆಪ್ಟೆಂಬರ್ 2022, 16:53 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿ.ಆಸ್ಕರ್ ಫೆರ್ನಾಂಡಿಸ್ ಪ್ರಥಮ ಪುಣ್ಯತಿಥಿಯನ್ನು ಅಭಿಮಾನಿಗಳು ಆಚರಿಸಿದರು.

ಮಹಿಳಾ ಮತ್ತು ಮಕ್ಕಳ ಅಸ್ಪತ್ರೆ ಹಾಗೂ ಕುಂದಾಪುರ ಸರ್ಕಾರಿ ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಆಸ್ಕರ್ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಆಸ್ಕರ್ ಸ್ಪಂದಿಸುತ್ತಿದ್ದರು. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಪುಣ್ಯಸ್ಮರಣೆಗೆ ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು.

ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಗೌರವ ಅಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ, ಪ್ರಮುಖರಾದ ಮಂಜಿತ್ ನಾಗರಾಜ್, ಮಹಮ್ಮದ್ ಶೀಶ್, ಕಾಂಗ್ರೆಸ್ ಮುಖಂಡರಾದ ಎಂ.ಎ.ಗಫೂರ್, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಅರ್ವಿನ್ ಫೆರ್ನಾಂಡಿಸ್, ನವೀನ್ ಶೆಟ್ಟಿ, ಹರೀಶ್ ಶೆಟ್ಟಿ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ಮಧುಸೂದನ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT