ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಸಚಿವ ಅಂಗಾರ

Published 27 ಏಪ್ರಿಲ್ 2023, 5:38 IST
Last Updated 27 ಏಪ್ರಿಲ್ 2023, 5:38 IST
ಅಕ್ಷರ ಗಾತ್ರ

ಸುಳ್ಯ (ದಕ್ಷಿಣ ಕನ್ನಡ): ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಕರುಳಿನಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಅವರು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಬಿಜೆಪಿ ಮೂಲಗಳು ತಿಳಿಸಿವೆ.

ಸುಳ್ಯ ಮೀಸಲು ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿದ್ದ ಅವರು, ಈ ಬಾರಿ ಟಿಕೆಟ್ ಕೈ ತಪ್ಪಿದಾಗ ರಾಜಕೀಯ ನಿವೃತ್ತಿ ಘೋಷಿಸಿದ್ದರು. ನಂತರ ಈ ಹೇಳಿಕೆಯನ್ನು ವಾಪಸ್ ಪಡೆದು, ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT