ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಮಾತನಾಡಿದ ಸಚಿವರು, ಉತ್ತರ ಪ್ರದೇಶ ಸರ್ಕಾರ ಈಚೆಗೆ ಲವ್ ಜಿಹಾದ್ ಕಾನೂನು ಜಾರಿ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿದ್ದು ಅದರ ಪ್ರತಿಯನ್ನು ಪಡೆದು ಪರಿಶೀಲಿಸಿ ಯಾವ ಅಂಶಗಳನ್ನು ಕಾನೂನಿನಲ್ಲಿ ಸೇರಿಸಬೇಕು ಎಂದು ಚರ್ಚಿಸಿ ನಿರ್ಧರಿಸಲಾಗುವುದು. ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ ಎಂದು ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದರು.