<p><strong>ಉಡುಪಿ</strong>: ಪ್ರತಿ ಬಾರಿಯ ಚುನಾವಣೆಯಲ್ಲಿ ಕ್ಷೇತ್ರಗಳನ್ನು ಬದಲಿಸಿ ಜನರಿಂದ ತಿರಸ್ಕೃತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಜನರು ಕೈ ಕೊಡಲಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ವ್ಯಂಗ್ಯವಾಡಿದರು.</p>.<p>ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ನಿರ್ಧಿಷ್ಟ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಮೂಲಕ ಆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು. ಆದರೆ, ಸಿದ್ದರಾಮಯ್ಯ ಪ್ರತಿಬಾರಿ ಕ್ಷೇತ್ರ ಬದಲಿಸುವ ಮೂಲಕ ಬದ್ಧತೆ ಮರೆತಿದ್ದಾರೆ ಎಂದರು.</p>.<p>ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದ ಜೆಡಿಎಸ್ ಪಕ್ಷಕ್ಕೆ, ವರುಣ, ಬಾದಾಮಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಕೈಕೊಟ್ಟಿದ್ದಾರೆ. ಹಾಗಾಗಿ ಕೋಲಾರದಲ್ಲಿ ಜನ ಅವರನ್ನು ತಿರಸ್ಕರಿಸಲಿದ್ದಾರೆ ಎಂದರು.</p>.<p>ಪಾದಯಾತ್ರೆ, ಪ್ರತಿಭಟನೆ ಹಾಗೂ ಹೋರಾಟ ಪ್ರಜಾಪ್ರಭುತ್ವದ ಭಾಗವಾಗಿದ್ದು ಪ್ರಣಾವನಂದ ಸ್ವಾಮೀಜಿ ಕೂಡ ಮಾಡುತ್ತಿದ್ದಾರೆ. ಸ್ವಾಮೀಜಿಗಳ ಪ್ರಮುಖ ಬೇಡಿಕೆಯನ್ನು ಸಮಾಜ ಹಾಗೂ ಸರ್ಕಾರ ಒಪ್ಪಿಕೊಂಡು ಅಧಿಕೃತವಾಗಿ ನಾರಾಯಣಗುರುಗಳ ನಿಗಮ ಘೋಷಿಸಿದೆ. ಹಾಗಾಗಿ, ಸ್ವಾಮೀಜಿ ಮರುಚಿಂತಿಸಬೇಕಾದ ಅವಶ್ಯಕತೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಪ್ರತಿ ಬಾರಿಯ ಚುನಾವಣೆಯಲ್ಲಿ ಕ್ಷೇತ್ರಗಳನ್ನು ಬದಲಿಸಿ ಜನರಿಂದ ತಿರಸ್ಕೃತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಜನರು ಕೈ ಕೊಡಲಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ವ್ಯಂಗ್ಯವಾಡಿದರು.</p>.<p>ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ನಿರ್ಧಿಷ್ಟ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಮೂಲಕ ಆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು. ಆದರೆ, ಸಿದ್ದರಾಮಯ್ಯ ಪ್ರತಿಬಾರಿ ಕ್ಷೇತ್ರ ಬದಲಿಸುವ ಮೂಲಕ ಬದ್ಧತೆ ಮರೆತಿದ್ದಾರೆ ಎಂದರು.</p>.<p>ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದ ಜೆಡಿಎಸ್ ಪಕ್ಷಕ್ಕೆ, ವರುಣ, ಬಾದಾಮಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಕೈಕೊಟ್ಟಿದ್ದಾರೆ. ಹಾಗಾಗಿ ಕೋಲಾರದಲ್ಲಿ ಜನ ಅವರನ್ನು ತಿರಸ್ಕರಿಸಲಿದ್ದಾರೆ ಎಂದರು.</p>.<p>ಪಾದಯಾತ್ರೆ, ಪ್ರತಿಭಟನೆ ಹಾಗೂ ಹೋರಾಟ ಪ್ರಜಾಪ್ರಭುತ್ವದ ಭಾಗವಾಗಿದ್ದು ಪ್ರಣಾವನಂದ ಸ್ವಾಮೀಜಿ ಕೂಡ ಮಾಡುತ್ತಿದ್ದಾರೆ. ಸ್ವಾಮೀಜಿಗಳ ಪ್ರಮುಖ ಬೇಡಿಕೆಯನ್ನು ಸಮಾಜ ಹಾಗೂ ಸರ್ಕಾರ ಒಪ್ಪಿಕೊಂಡು ಅಧಿಕೃತವಾಗಿ ನಾರಾಯಣಗುರುಗಳ ನಿಗಮ ಘೋಷಿಸಿದೆ. ಹಾಗಾಗಿ, ಸ್ವಾಮೀಜಿ ಮರುಚಿಂತಿಸಬೇಕಾದ ಅವಶ್ಯಕತೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>