ಜಿಲ್ಲೆಯ 68 ಗ್ರಾಮಗಳಲ್ಲಿ ಹೆಚ್ಚಿನ ಮಳೆ ಹಾನಿಯಾಗಿದ್ದು, ಗ್ರಾಮ ಲೆಕ್ಕಿಗರು, ಕೃಷಿ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆ ಸಿಬ್ಬಂದಿ ಜಂಟಿಯಾಗಿ ಸಮೀಕ್ಷೆ ಮಾಡಬೇಕು.ಪಶ್ಚಿಮಘಟ್ಟದಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿಗಳು ಉಕ್ಕಿ, ಕೃಷಿ ಭೂಮಿಗೆ ಹಾನಿಯಾಗಿದೆ. ಜತೆಗೆ ಕಡಲ್ಕೊರೆತ ಉಂಟಾಗಿದೆ. ನಷ್ಟದ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂದು ಸಚಿವರು ತಿಳಿಸಿದರು.