<p><strong>ಉಡುಪಿ: </strong>ಮಲ್ಪೆಯ ಕಡಲ ತೀರದಲ್ಲಿ 800 ವರ್ಷಗಳ ಹಿಂದೆ ಆಚಾರ್ಯ ಮಧ್ವರಿಗೆ ಗೋಪಿಚಂದನದೊಳಗೆ ಕಡೆಗೋಲು ಕೃಷ್ಣನ ಮೂರ್ತಿ ಸಿಕ್ಕ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಕೃಷ್ಣನ ಬೃಹತ್ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಶೀಘ್ರ ಆರಂಭವಾಗಬೇಕು ಎಂದು ಅಷ್ಠಮಠಾಧೀಶರು ಸಚಿವ ಈಶ್ವರಪ್ಪ ಅವರಿಗೆ ತಿಳಿಸಿದರು.</p>.<p>ಗುರುವಾರ ಕೃಷ್ಣಮಠಕ್ಕೆ ಸಚಿವ ಈಶ್ವರಪ್ಪ ಭೇಟಿನೀಡಿದ ಸಂದರ್ಭ ‘ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಗುದ್ದಲಿ ಪೂಜೆ ನಡೆದು ಹಲವು ವರ್ಷಗಳು ಕಳೆದಿವೆ ಆದರೆ, ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು’ ಸಚಿವರಿಗೆ ಮಠಾಧೀಶರು ಹೇಳಿದರು.</p>.<p>ಕಾಮಗಾರಿ ಅಡಚಣೆಗಳನ್ನು ಸರಿಪಡಿಸಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಪ್ರಯತ್ನಿಸುವುದಾಗಿ ಸಚಿವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು. ಈ ಸಂದರ್ಭ ಸಚಿವ ಈಶ್ವರಪ್ಪ ಅವರಿಗೆ ಸ್ವಾಮೀಜಿಗಳು ಶಾಲುಹೊದಿಸಿ, ಸನ್ಮಾನ ಮಾಡಿ, ಸ್ಮರಣಿಕೆ ನೀಡಿದರು.</p>.<p>ಈ ಸಂದರ್ಭ ಅದಮಾರು ಮಠದ ವಿಶ್ವಪ್ರಿಯತೀರ್ಥರು, ಈಶಪ್ರಿಯ ತೀರ್ಥರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥರು, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ವಿಶ್ವವಲ್ಲಭ ತೀರ್ಥರು, ಪಲಿಮಾರು ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥರು ಇದ್ದರು.</p>.<p>ಶುಕ್ರವಾರ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದು, ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಮಲ್ಪೆಯ ಕಡಲ ತೀರದಲ್ಲಿ 800 ವರ್ಷಗಳ ಹಿಂದೆ ಆಚಾರ್ಯ ಮಧ್ವರಿಗೆ ಗೋಪಿಚಂದನದೊಳಗೆ ಕಡೆಗೋಲು ಕೃಷ್ಣನ ಮೂರ್ತಿ ಸಿಕ್ಕ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಕೃಷ್ಣನ ಬೃಹತ್ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಶೀಘ್ರ ಆರಂಭವಾಗಬೇಕು ಎಂದು ಅಷ್ಠಮಠಾಧೀಶರು ಸಚಿವ ಈಶ್ವರಪ್ಪ ಅವರಿಗೆ ತಿಳಿಸಿದರು.</p>.<p>ಗುರುವಾರ ಕೃಷ್ಣಮಠಕ್ಕೆ ಸಚಿವ ಈಶ್ವರಪ್ಪ ಭೇಟಿನೀಡಿದ ಸಂದರ್ಭ ‘ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಗುದ್ದಲಿ ಪೂಜೆ ನಡೆದು ಹಲವು ವರ್ಷಗಳು ಕಳೆದಿವೆ ಆದರೆ, ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು’ ಸಚಿವರಿಗೆ ಮಠಾಧೀಶರು ಹೇಳಿದರು.</p>.<p>ಕಾಮಗಾರಿ ಅಡಚಣೆಗಳನ್ನು ಸರಿಪಡಿಸಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಪ್ರಯತ್ನಿಸುವುದಾಗಿ ಸಚಿವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು. ಈ ಸಂದರ್ಭ ಸಚಿವ ಈಶ್ವರಪ್ಪ ಅವರಿಗೆ ಸ್ವಾಮೀಜಿಗಳು ಶಾಲುಹೊದಿಸಿ, ಸನ್ಮಾನ ಮಾಡಿ, ಸ್ಮರಣಿಕೆ ನೀಡಿದರು.</p>.<p>ಈ ಸಂದರ್ಭ ಅದಮಾರು ಮಠದ ವಿಶ್ವಪ್ರಿಯತೀರ್ಥರು, ಈಶಪ್ರಿಯ ತೀರ್ಥರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥರು, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ವಿಶ್ವವಲ್ಲಭ ತೀರ್ಥರು, ಪಲಿಮಾರು ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥರು ಇದ್ದರು.</p>.<p>ಶುಕ್ರವಾರ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದು, ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>