ಉಡುಪಿಯ ಟಿಎಂಎ ಪೈ ಆಸ್ಪತ್ರೆಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಹಾಗೂ ಉಡುಪಿ ತಾಲ್ಲೂಕು ಆರೋಗ್ಯಾಧಿಕಾರಿ ನಾಗರತ್ನ ಅವರನ್ನು ಸನ್ಮಾನಿಸಲಾಯಿತು. ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕ ಎಂ.ಎಚ್.ವಿಠ್ಠಲ ಸೇರಿಗಾರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಇದ್ದರು.