ಮತದಾರರು ವಿಧಾನಸಭೆಯಲ್ಲಿ ತಮ್ಮ ಧ್ವನಿಯಾಗಲಿ ಎನ್ನುವ ಕಾರಣಕ್ಕಾಗಿ ಅಧಿಕ ಮತ ನೀಡಿ ಇವರನ್ನು ಆಯ್ಕೆ ಮಾಡಿದ್ದಾರೆ. ಆದರೆ ಜಿಲ್ಲೆಯ ಬಿಜೆಪಿ ಶಾಸಕರು ಜವಾಬ್ದಾರಿ ನಿರ್ವಹಿಸುವುದನ್ನು ಬಿಟ್ಟು, ಜಿಲ್ಲೆಯ ಎಲ್ಲಾ ಆಗುಹೋಗುಗಳಲ್ಲಿ ರಾಜಕಾರಣ ಮಾಡುವುದು ಮಾತ್ರ ತಮ್ಮ ಕೆಲಸ ಎಂದು ತಿಳಿದಂತಿದೆ. ಜಿಲ್ಲೆಯ ಸಾಮರಸ್ಯ ಹಾಗೂ ಅಭಿವೃದ್ಧಿಗಾಗಿ ಜಿಲ್ಲೆಯ ಬಿಜೆಪಿ ಶಾಸಕರು ಜವಾಬ್ದಾರಿ ಅರಿತು ಕೆಲಸ ಮಾಡಲಿ ಎಂದು ವಿಕಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.