<p><strong>ಉಡುಪಿ</strong>: ಕೃಷ್ಣಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ರೋಡ್ ಶೋ ನಡೆಸಿದರು.</p><p>ಆದಿ ಉಡುಪಿಯ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮೋದಿ ಅವರು ಬಿಗಿ ಭದ್ರತೆಯ ನಡುವೆ, ನಗರದ ಬನ್ನಂಜೆ ವೃತ್ತದಿಂದ ಕಲ್ಸಂಕ ವೃತ್ತದ ವರೆಗೆ ರೋಡ್ ಶೋ ನಡೆಸಿ, ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರತ್ತ ಕೈಬೀಸಿದರು.</p><p>ಪ್ರಧಾನಿ ಅವರ ರೋಡ್ ಶೋ ವೀಕ್ಷಿಸಲು ಜನರು ಬೆಳಿಗ್ಗೆಯೇ ಜಿಲ್ಲೆಯ ವಿವಿಧೆಡೆಗಳಿಂದ ಬಂದು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದರು. ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದರಿಂದ ಜನರು ವಾಹನ ಪಾರ್ಕಿಂಗ್ ಸ್ಥಳಗಳಿಂದ ನಡೆದುಕೊಂಡೇ ರೋಡ್ ಶೋ ನಡೆಯುವ ಸ್ಥಳಗಳಿಗೆ ಬಂದಿದ್ದರು.</p><p>ರೋಡ್ ಶೋ ವೇಳೆ ನಗರದ ಕೆಲವೆಡೆ ನಿರ್ಮಿಸಿದ್ದ ವೇದಿಕೆಗಳಲ್ಲಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.</p>.ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ....28 ರಂದು ಉಡುಪಿ ಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿ: ಸುಗುಣೇಂದ್ರ ತೀರ್ಥರು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕೃಷ್ಣಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ರೋಡ್ ಶೋ ನಡೆಸಿದರು.</p><p>ಆದಿ ಉಡುಪಿಯ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮೋದಿ ಅವರು ಬಿಗಿ ಭದ್ರತೆಯ ನಡುವೆ, ನಗರದ ಬನ್ನಂಜೆ ವೃತ್ತದಿಂದ ಕಲ್ಸಂಕ ವೃತ್ತದ ವರೆಗೆ ರೋಡ್ ಶೋ ನಡೆಸಿ, ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರತ್ತ ಕೈಬೀಸಿದರು.</p><p>ಪ್ರಧಾನಿ ಅವರ ರೋಡ್ ಶೋ ವೀಕ್ಷಿಸಲು ಜನರು ಬೆಳಿಗ್ಗೆಯೇ ಜಿಲ್ಲೆಯ ವಿವಿಧೆಡೆಗಳಿಂದ ಬಂದು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದರು. ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದರಿಂದ ಜನರು ವಾಹನ ಪಾರ್ಕಿಂಗ್ ಸ್ಥಳಗಳಿಂದ ನಡೆದುಕೊಂಡೇ ರೋಡ್ ಶೋ ನಡೆಯುವ ಸ್ಥಳಗಳಿಗೆ ಬಂದಿದ್ದರು.</p><p>ರೋಡ್ ಶೋ ವೇಳೆ ನಗರದ ಕೆಲವೆಡೆ ನಿರ್ಮಿಸಿದ್ದ ವೇದಿಕೆಗಳಲ್ಲಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.</p>.ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ....28 ರಂದು ಉಡುಪಿ ಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿ: ಸುಗುಣೇಂದ್ರ ತೀರ್ಥರು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>