ಶನಿವಾರ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ‘ಕರಾವಳಿಯ ಹೆಮ್ಮೆಯ ಬ್ಯಾಂಕ್ಗಳಾದ ಸಿಂಡಿಕೇಟ್, ಕೆನರಾ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ಗಳನ್ನು ವಿಲೀನಗೊಳಿಸುವ ನಿರ್ಧಾರ ಖಂಡನೀಯ. ಹಿಂದೆ, ಇಂದಿರಾಗಾಂಧಿ ಬ್ಯಾಂಕ್ಗಳನ್ನು ರಾಷ್ಟ್ರೀಕರಣಗೊಳಿಸಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜನರ ಬಳಿಗೆ ತಲುಪಿಸಿದರು. ಈಗ ಬಿಜೆಪಿ ಸರ್ಕಾರ ಬ್ಯಾಂಕ್ಗಳನ್ನು ವಿಲೀನಗೊಳಿಸುವ ಮೂಲಕ ಜನರಿಂದ ದೂರವಾಗಿಸುತ್ತಿದೆ’ ಎಂದು ಟೀಕಿಸಿದರು.