ಅಧಿಕಾರಿಗಳು ಸಮೂಹ ಸಾರಿಗೆಯಲ್ಲಿ ಪ್ರಯಾಣಿಸುವುದರಿಂದ ವಾಯು ಮಾಲಿನ್ಯ ತಡೆಗಟ್ಟಬಹುದು. ಪರಿಸರಕ್ಕೆ ಕೈಲಾದ ಸೇವೆ ಮಾಡಬಹುದು. ಇದೇ ಮಾದರಿಯನ್ನು ಖಾಸಗಿ ಸಂಸ್ಥೆಗಳು, ಬ್ಯಾಂಕ್ಗಳು, ಕಾರ್ಪೋರೇಟ್ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಿದರೆ ಪರಿಸರ ಸಂರಕ್ಷಣೆಗೆ ಕೈಜೋಡಿಸಬಹುದು. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ಅಗತ್ಯ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.