<p><strong>ಉಡುಪಿ</strong>: ಹೆಬ್ರಿಯ ಕುಚ್ಚೂರು ರಸ್ತೆ ಹಾಗೂ ಸಿದ್ದಾಪುರದ ಜನ್ಸಾಲೆ ವ್ಯಾಪ್ತಿಯಲ್ಲಿ ಭಾನುವಾರ ಹಾಗೂ ಸೋಮವಾರ ಮತ್ತೆರಡು ಮಂಗಗಳ ಶವ ಪತ್ತೆಯಾಗಿದೆ.</p>.<p>ಮತ್ತೊಂದೆಡೆ ಬ್ರಹ್ಮಾವರದಲ್ಲಿ ವ್ಯಕ್ತಿಯೊಬ್ಬರಿಗೆ ಶಂಕಿತ ಮಂಗನ ಕಾಯಿಲೆ ಗುಣಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಂಗನ ಕಾಯಿಲೆಗೆ ನಿಯೋಜಿತಗೊಂಡ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದರು.</p>.<p>ಇದುವರೆಗೂ 53 ಮಂಗಗಳ ದೇಹದ ಭಾಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 12ರಲ್ಲಿ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ. ಮನುಷ್ಯರಲ್ಲಿ ಸೋಂಕು ಹರಡದಂತೆ ಜಿಲ್ಲಾ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ ಎಂದು ಅವರು ತಿಳಿಸಿದರು.</p>.<p>ಕೊಲ್ಲೂರು ವ್ಯಾಪ್ತಿಯಲ್ಲಿ ಸಂಚಾರಿ ವಾಹನದ ಮೂಲಕ ಕೆಎಫ್ಡಿ ಹರಡುವಿಕೆ ಹಾಗೂ ರೋಗ ತಡೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ತಪಾಸಣೆ ಕೂಡ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಕಡ್ತಲ ಗ್ರಾಮ ಪಂಚಾಯತ್ ಹಾಗೂ ಪಿಡಿಒಗಳ ಜತೆಗೂಡಿ ಕೊರಗರ ಕಾಲೋನಿಗಳಿಗೆ ಭೇಟಿ ನೀಡಿ ರೋಗದ ಕುರಿತು ಅರಿವು ಮೂಡಿಸಲಾಗುತ್ತಿದೆ. ಕಾರ್ಕಳದಲ್ಲಿ ಕಾರ್ಯಾಗಾರ ನಡೆಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಹೆಬ್ರಿಯ ಕುಚ್ಚೂರು ರಸ್ತೆ ಹಾಗೂ ಸಿದ್ದಾಪುರದ ಜನ್ಸಾಲೆ ವ್ಯಾಪ್ತಿಯಲ್ಲಿ ಭಾನುವಾರ ಹಾಗೂ ಸೋಮವಾರ ಮತ್ತೆರಡು ಮಂಗಗಳ ಶವ ಪತ್ತೆಯಾಗಿದೆ.</p>.<p>ಮತ್ತೊಂದೆಡೆ ಬ್ರಹ್ಮಾವರದಲ್ಲಿ ವ್ಯಕ್ತಿಯೊಬ್ಬರಿಗೆ ಶಂಕಿತ ಮಂಗನ ಕಾಯಿಲೆ ಗುಣಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಂಗನ ಕಾಯಿಲೆಗೆ ನಿಯೋಜಿತಗೊಂಡ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದರು.</p>.<p>ಇದುವರೆಗೂ 53 ಮಂಗಗಳ ದೇಹದ ಭಾಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 12ರಲ್ಲಿ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ. ಮನುಷ್ಯರಲ್ಲಿ ಸೋಂಕು ಹರಡದಂತೆ ಜಿಲ್ಲಾ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ ಎಂದು ಅವರು ತಿಳಿಸಿದರು.</p>.<p>ಕೊಲ್ಲೂರು ವ್ಯಾಪ್ತಿಯಲ್ಲಿ ಸಂಚಾರಿ ವಾಹನದ ಮೂಲಕ ಕೆಎಫ್ಡಿ ಹರಡುವಿಕೆ ಹಾಗೂ ರೋಗ ತಡೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ತಪಾಸಣೆ ಕೂಡ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಕಡ್ತಲ ಗ್ರಾಮ ಪಂಚಾಯತ್ ಹಾಗೂ ಪಿಡಿಒಗಳ ಜತೆಗೂಡಿ ಕೊರಗರ ಕಾಲೋನಿಗಳಿಗೆ ಭೇಟಿ ನೀಡಿ ರೋಗದ ಕುರಿತು ಅರಿವು ಮೂಡಿಸಲಾಗುತ್ತಿದೆ. ಕಾರ್ಕಳದಲ್ಲಿ ಕಾರ್ಯಾಗಾರ ನಡೆಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>