ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಯಿಲೆ: ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ

ಕೊಲ್ಲೂರಿನಲ್ಲಿ ಸಂಚಾರಿ ವಾಹನದ ಮೂಲಕ ರೋಗದ ಕುರಿತು ಮಾಹಿತಿ, ತಪಾಸಣೆ
Last Updated 11 ಫೆಬ್ರುವರಿ 2019, 14:42 IST
ಅಕ್ಷರ ಗಾತ್ರ

ಉಡುಪಿ: ಹೆಬ್ರಿಯ ಕುಚ್ಚೂರು ರಸ್ತೆ ಹಾಗೂ ಸಿದ್ದಾಪುರದ ಜನ್ಸಾಲೆ ವ್ಯಾಪ್ತಿಯಲ್ಲಿ ಭಾನುವಾರ ಹಾಗೂ ಸೋಮವಾರ ಮತ್ತೆರಡು ಮಂಗಗಳ ಶವ ಪತ್ತೆಯಾಗಿದೆ.

ಮತ್ತೊಂದೆಡೆ ಬ್ರಹ್ಮಾವರದಲ್ಲಿ ವ್ಯಕ್ತಿಯೊಬ್ಬರಿಗೆ ಶಂಕಿತ ಮಂಗನ ಕಾಯಿಲೆ ಗುಣಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಂಗನ ಕಾಯಿಲೆಗೆ ನಿಯೋಜಿತಗೊಂಡ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್‌ ತಿಳಿಸಿದರು.

ಇ‌ದುವರೆಗೂ 53 ಮಂಗಗಳ ದೇಹದ ಭಾಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 12ರಲ್ಲಿ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ. ಮನುಷ್ಯರಲ್ಲಿ ಸೋಂಕು ಹರಡದಂತೆ ಜಿಲ್ಲಾ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ ಎಂದು ಅವರು ತಿಳಿಸಿದರು.

ಕೊಲ್ಲೂರು ವ್ಯಾಪ್ತಿಯಲ್ಲಿ ಸಂಚಾರಿ ವಾಹನದ ಮೂಲಕ ಕೆಎಫ್‌ಡಿ ಹರಡುವಿಕೆ ಹಾಗೂ ರೋಗ ತಡೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ತಪಾಸಣೆ ಕೂಡ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಡ್ತಲ ಗ್ರಾಮ ಪಂಚಾಯತ್ ಹಾಗೂ ಪಿಡಿಒಗಳ ಜತೆಗೂಡಿ ಕೊರಗರ ಕಾಲೋನಿಗಳಿಗೆ ಭೇಟಿ ನೀಡಿ ರೋಗದ ಕುರಿತು ಅರಿವು ಮೂಡಿಸಲಾಗುತ್ತಿದೆ. ಕಾರ್ಕಳದಲ್ಲಿ ಕಾರ್ಯಾಗಾರ ನಡೆಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT