<p><strong>ಉಡುಪಿ:</strong> ಮಂಗನ ಕಾಯಿಲೆಗೆ ಹೊಸ ಲಸಿಕೆ ತಯಾರಿಸುವ ಸಂಬಂಧ ಐಸಿಎಂಆರ್ ಜೊತೆ ಚರ್ಚಿಸಲಾಗಿದ್ದು, ಲಸಿಕೆ ತಯಾರಿಸಲು ಒಪ್ಪಿಗೆ ದೊರೆತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಮಂಗನ ಕಾಯಿಲೆ ನಿಯಂತ್ರಣ ಕುರಿತು ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು.</p>.<p>ಮಂಗನ ಕಾಯಿಲೆಗೆ ಹಳೆಯ ಲಸಿಕೆ ಬಳಸುವಂತಿಲ್ಲ ಎಂಬ ಆದೇಶದ ಹಿನ್ನೆಲೆಯಲ್ಲಿ ಹೊಸ ಲಸಿಕೆ ತಯಾರಿಸಲು ಐಸಿಎಂಆರ್ಗೆ 2 ತಿಂಗಳ ಹಿಂದೆ ಮನವಿ ಮಾಡಲಾಗಿತ್ತು. ಅದರಂತೆ, ಹೈದರಾಬಾದ್ನ ಇಂಡಿಯನ್ ಇಮ್ಯುನಾಲಜಿಕಲ್ ಸಂಸ್ಥೆ ಸಂಶೋಧನೆ ಹಾಗೂ ಲಸಿಕೆ ತಯಾರಿಸುವ ಹೊಣೆ ಹೊತ್ತಿದ್ದು, ಮುಂದಿನ ವರ್ಷ ಹೊಸ ಲಸಿಕೆ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಕನ್ನಡ 38, ಶಿವಮೊಗ್ಗ 25 ಹಾಗೂ ಚಿಕ್ಕಮಗಳೂರಿನಲ್ಲಿ 6 ಮಂದಿಗೆ ಕೆಎಫ್ಡಿ ಸೋಂಕು ದೃಢಪಟ್ಟಿದ್ದು, 20 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ಅಗತ್ಯ ಔಷಧ ಪೂರೈಕೆ ಜತೆಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಂಗನ ಕಾಯಿಲೆಗೆ ಹೊಸ ಲಸಿಕೆ ತಯಾರಿಸುವ ಸಂಬಂಧ ಐಸಿಎಂಆರ್ ಜೊತೆ ಚರ್ಚಿಸಲಾಗಿದ್ದು, ಲಸಿಕೆ ತಯಾರಿಸಲು ಒಪ್ಪಿಗೆ ದೊರೆತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಮಂಗನ ಕಾಯಿಲೆ ನಿಯಂತ್ರಣ ಕುರಿತು ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು.</p>.<p>ಮಂಗನ ಕಾಯಿಲೆಗೆ ಹಳೆಯ ಲಸಿಕೆ ಬಳಸುವಂತಿಲ್ಲ ಎಂಬ ಆದೇಶದ ಹಿನ್ನೆಲೆಯಲ್ಲಿ ಹೊಸ ಲಸಿಕೆ ತಯಾರಿಸಲು ಐಸಿಎಂಆರ್ಗೆ 2 ತಿಂಗಳ ಹಿಂದೆ ಮನವಿ ಮಾಡಲಾಗಿತ್ತು. ಅದರಂತೆ, ಹೈದರಾಬಾದ್ನ ಇಂಡಿಯನ್ ಇಮ್ಯುನಾಲಜಿಕಲ್ ಸಂಸ್ಥೆ ಸಂಶೋಧನೆ ಹಾಗೂ ಲಸಿಕೆ ತಯಾರಿಸುವ ಹೊಣೆ ಹೊತ್ತಿದ್ದು, ಮುಂದಿನ ವರ್ಷ ಹೊಸ ಲಸಿಕೆ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಕನ್ನಡ 38, ಶಿವಮೊಗ್ಗ 25 ಹಾಗೂ ಚಿಕ್ಕಮಗಳೂರಿನಲ್ಲಿ 6 ಮಂದಿಗೆ ಕೆಎಫ್ಡಿ ಸೋಂಕು ದೃಢಪಟ್ಟಿದ್ದು, 20 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ಅಗತ್ಯ ಔಷಧ ಪೂರೈಕೆ ಜತೆಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>