<p><strong>ಉಡುಪಿ:</strong> ಜೂನ್ ಆರಂಭವಾದರೂ ಜಿಲ್ಲೆಗೆ ಮುಂಗಾರು ಕಾಲಿಡದಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ನೀರಿನ ಮೂಲಗಳೆಲ್ಲ ಬರಿದಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಮಳೆ ಸುರಿಯದಿದ್ದರೆ ಪರಿಸ್ಥಿತಿ ಗಂಭೀರವಾಗಲಿದೆ.</p>.<p>ಕಳೆದ ವರ್ಷ ಮೇ ತಿಂಗಳಿನಲ್ಲಿಯೇ ಜಿಲ್ಲೆಗೆ ಮುಂಗಾರು ಪ್ರವೇಶಿಸಿತ್ತು. ಎಡೆಬಿಡದೆ ಸುರಿದ ಮಳೆಗೆ ನಗರಕ್ಕೆ ನೀರು ಪೂರೈಸುವ ಬಜೆ ಜಲಾಶಯ ತುಂಬಿ ಹರಿದಿತ್ತು. ಆದರೆ, ಈ ವರ್ಷ ಜೂನ್ 2ನೇ ವಾರವಾದರೂ ವರುಣನ ಆರ್ಭಟವಿಲ್ಲ.ಒಂದೆರಡು ಬಾರಿ ತುಂತುರು ಮಳೆಯಾಗಿದ್ದು ಬಿಟ್ಟರೆ ಇದುವರೆಗೂ ಬಿರುಸಾದ ಮಳೆ ಸುರಿದಿಲ್ಲ. ಕಳೆದ ವರ್ಷ ಮೈದುಂಬಿಕೊಂಡಿದ್ದ ಬಜೆ ಜಲಾಶಯ ಈಗ ತಳ ತಲುಪಿದೆ.</p>.<p><strong>ಬತ್ತಿದ ಸ್ವರ್ಣೆ ಒಡಲು:</strong>ಈ ವರ್ಷ ಬಿರು ಬೇಸಿಗೆಯ ಕಾರಣಕ್ಕೆ ಮೇ ತಿಂಗಳ ಆರಂಭದಲ್ಲೇ ಬಜೆ ಜಲಾಶಯ ಬತ್ತಿದ್ದರಿಂದ ನಗರಸಭೆ ಸ್ವರ್ಣಾ ನದಿ ಪಾತ್ರದಲ್ಲಿ ಡ್ರೆಜಿಂಗ್ ಮಾಡಿತ್ತು. ಮಾಣೈ, ಭಂಡಾರಿಬೆಟ್ಟು ಹಳ್ಳಗಳಲ್ಲಿ ಸಂಗ್ರಹವಾಗಿದ್ದ ನೀರನ್ನು ಬೃಹತ್ ಪಂಪ್ಸೆಟ್ಗಳ ಮೂಲಕ ಎತ್ತಿ ಜಲಾಶಯದ ಜಾಕ್ವೆಲ್ಗೆ ಹರಿಸಲಾಗಿತ್ತು.</p>.<p>ಲಭ್ಯ ನೀರನ್ನು ಹಂಚಲು ರೇಷನಿಂಗ್ ವ್ಯವಸ್ಥೆ ಜಾರಿಗೊಳಿಸಿ 35 ವಾರ್ಡ್ಗಳನ್ನು 6 ವಿಭಾಗಗಳನ್ನಾಗಿ ವಿಂಗಡಿಸಿ 6 ದಿನಗಳಿಗೊಮ್ಮೆ ವಾರ್ಡ್ವಾರು ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿತ್ತು.</p>.<p>ನೀರಿನ ಮೂಲಗಳಾಗಿದ್ದ ಮಾಣೈ, ಭಂಡಾರಿಬೆಟ್ಟು ಹಳ್ಳಗಳು ವಾರದ ಹಿಂದೆಯೇ ಬರಿದಾಗಿದ್ದು, ಈಗ ಪುತ್ತಿಗೆ ಮಠದ ಸೇತುವೆ ಬಳಿ ಡ್ರೆಜಿಂಗ್ ನಡೆಯುತ್ತಿದೆ. ಅಲ್ಲಿಯೂ ನೀರು ಖಾಲಿಯಾಗುತ್ತಿದ್ದು, ಮುಂದೆ ನೀರು ಎತ್ತುವುದು ಎಲ್ಲಿಂದ ಎಂಬ ಪ್ರಶ್ನೆ ಕಾಡುತ್ತಿದೆ.</p>.<p>ಈಗಾಗಲೇ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಹೆಚ್ಚಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರಿನ ಪರ್ಯಾಯ ಮೂಲಗಳಾಗಿದ್ದ ಬಾವಿಗಳಲ್ಲಿ ನೀರಿನ ಮಟ್ಟ ಪಾತಾಳ ತಲುಪಿದ್ದು, ತಳದಲ್ಲಿ ಕೆಸರು ಕಾಣುತ್ತಿದೆ.</p>.<p><strong>ಟ್ಯಾಂಕರ್ ನೀರೂ ಸಿಗುತ್ತಿಲ್ಲ:</strong>ಬೇಡಿಕೆಯಷ್ಟು ಟ್ಯಾಂಕರ್ ನೀರು ಸಿಗುತ್ತಿಲ್ಲ. ದೂರದ ಹಳ್ಳಗಳಿಂದ ಕುಡಿಯಲು ಯೋಗ್ಯವಿಲ್ಲದ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಟ್ಯಾಂಕರ್ಗೆ ದುಬಾರಿ ಹಣ ತೆರಲು ಸಿದ್ಧರಿದ್ದರೂ ಶುದ್ಧ ನೀರು ಸಿಗುತ್ತಿಲ್ಲ.</p>.<p>ನೀರಿನ ಸಮಸ್ಯೆ ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟುಕೊಟ್ಟಿದ್ದು, ಹಲವು ಹೋಟೆಲ್ಗಳನ್ನು ಮುಚ್ಚಲಾಗಿದೆ. ಕೆಲವು ಹೋಟೆಲ್ಗಳಲ್ಲಿ ನೀರಿನ ಮಿತ ಬಳಕೆಗೆ ಬೋರ್ಡ್ಗಳನ್ನು ಹಾಕಲಾಗಿದೆ. ಕಾಗದದ ಪ್ಲೇಟ್, ಲೋಟಗಳನ್ನು ಬಳಸಲಾಗುತ್ತಿದೆ.</p>.<p>ಸಾರ್ವಜನಿಕ ಶೌಚಾಲಯಗಳಲ್ಲೂ ನೀರಿಗೆ ಸಮಸ್ಯೆ ಎದುರಾಗಿದೆ. ಹಲವು ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೀರು ಸಿಗದೆ ಮಧ್ಯಾಹ್ನ ಶಾಲೆಗಳಿಗೆ ರಜೆ ನೀಡಲಾಗುತ್ತಿದೆ. ಕೂಡಲೇ ಮಳೆಬಿದ್ದರೆ ಮಾತ್ರ ನೀರಿನ ಸಮಸ್ಯೆ ಬಗೆಹರಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜೂನ್ ಆರಂಭವಾದರೂ ಜಿಲ್ಲೆಗೆ ಮುಂಗಾರು ಕಾಲಿಡದಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ನೀರಿನ ಮೂಲಗಳೆಲ್ಲ ಬರಿದಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಮಳೆ ಸುರಿಯದಿದ್ದರೆ ಪರಿಸ್ಥಿತಿ ಗಂಭೀರವಾಗಲಿದೆ.</p>.<p>ಕಳೆದ ವರ್ಷ ಮೇ ತಿಂಗಳಿನಲ್ಲಿಯೇ ಜಿಲ್ಲೆಗೆ ಮುಂಗಾರು ಪ್ರವೇಶಿಸಿತ್ತು. ಎಡೆಬಿಡದೆ ಸುರಿದ ಮಳೆಗೆ ನಗರಕ್ಕೆ ನೀರು ಪೂರೈಸುವ ಬಜೆ ಜಲಾಶಯ ತುಂಬಿ ಹರಿದಿತ್ತು. ಆದರೆ, ಈ ವರ್ಷ ಜೂನ್ 2ನೇ ವಾರವಾದರೂ ವರುಣನ ಆರ್ಭಟವಿಲ್ಲ.ಒಂದೆರಡು ಬಾರಿ ತುಂತುರು ಮಳೆಯಾಗಿದ್ದು ಬಿಟ್ಟರೆ ಇದುವರೆಗೂ ಬಿರುಸಾದ ಮಳೆ ಸುರಿದಿಲ್ಲ. ಕಳೆದ ವರ್ಷ ಮೈದುಂಬಿಕೊಂಡಿದ್ದ ಬಜೆ ಜಲಾಶಯ ಈಗ ತಳ ತಲುಪಿದೆ.</p>.<p><strong>ಬತ್ತಿದ ಸ್ವರ್ಣೆ ಒಡಲು:</strong>ಈ ವರ್ಷ ಬಿರು ಬೇಸಿಗೆಯ ಕಾರಣಕ್ಕೆ ಮೇ ತಿಂಗಳ ಆರಂಭದಲ್ಲೇ ಬಜೆ ಜಲಾಶಯ ಬತ್ತಿದ್ದರಿಂದ ನಗರಸಭೆ ಸ್ವರ್ಣಾ ನದಿ ಪಾತ್ರದಲ್ಲಿ ಡ್ರೆಜಿಂಗ್ ಮಾಡಿತ್ತು. ಮಾಣೈ, ಭಂಡಾರಿಬೆಟ್ಟು ಹಳ್ಳಗಳಲ್ಲಿ ಸಂಗ್ರಹವಾಗಿದ್ದ ನೀರನ್ನು ಬೃಹತ್ ಪಂಪ್ಸೆಟ್ಗಳ ಮೂಲಕ ಎತ್ತಿ ಜಲಾಶಯದ ಜಾಕ್ವೆಲ್ಗೆ ಹರಿಸಲಾಗಿತ್ತು.</p>.<p>ಲಭ್ಯ ನೀರನ್ನು ಹಂಚಲು ರೇಷನಿಂಗ್ ವ್ಯವಸ್ಥೆ ಜಾರಿಗೊಳಿಸಿ 35 ವಾರ್ಡ್ಗಳನ್ನು 6 ವಿಭಾಗಗಳನ್ನಾಗಿ ವಿಂಗಡಿಸಿ 6 ದಿನಗಳಿಗೊಮ್ಮೆ ವಾರ್ಡ್ವಾರು ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿತ್ತು.</p>.<p>ನೀರಿನ ಮೂಲಗಳಾಗಿದ್ದ ಮಾಣೈ, ಭಂಡಾರಿಬೆಟ್ಟು ಹಳ್ಳಗಳು ವಾರದ ಹಿಂದೆಯೇ ಬರಿದಾಗಿದ್ದು, ಈಗ ಪುತ್ತಿಗೆ ಮಠದ ಸೇತುವೆ ಬಳಿ ಡ್ರೆಜಿಂಗ್ ನಡೆಯುತ್ತಿದೆ. ಅಲ್ಲಿಯೂ ನೀರು ಖಾಲಿಯಾಗುತ್ತಿದ್ದು, ಮುಂದೆ ನೀರು ಎತ್ತುವುದು ಎಲ್ಲಿಂದ ಎಂಬ ಪ್ರಶ್ನೆ ಕಾಡುತ್ತಿದೆ.</p>.<p>ಈಗಾಗಲೇ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಹೆಚ್ಚಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರಿನ ಪರ್ಯಾಯ ಮೂಲಗಳಾಗಿದ್ದ ಬಾವಿಗಳಲ್ಲಿ ನೀರಿನ ಮಟ್ಟ ಪಾತಾಳ ತಲುಪಿದ್ದು, ತಳದಲ್ಲಿ ಕೆಸರು ಕಾಣುತ್ತಿದೆ.</p>.<p><strong>ಟ್ಯಾಂಕರ್ ನೀರೂ ಸಿಗುತ್ತಿಲ್ಲ:</strong>ಬೇಡಿಕೆಯಷ್ಟು ಟ್ಯಾಂಕರ್ ನೀರು ಸಿಗುತ್ತಿಲ್ಲ. ದೂರದ ಹಳ್ಳಗಳಿಂದ ಕುಡಿಯಲು ಯೋಗ್ಯವಿಲ್ಲದ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಟ್ಯಾಂಕರ್ಗೆ ದುಬಾರಿ ಹಣ ತೆರಲು ಸಿದ್ಧರಿದ್ದರೂ ಶುದ್ಧ ನೀರು ಸಿಗುತ್ತಿಲ್ಲ.</p>.<p>ನೀರಿನ ಸಮಸ್ಯೆ ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟುಕೊಟ್ಟಿದ್ದು, ಹಲವು ಹೋಟೆಲ್ಗಳನ್ನು ಮುಚ್ಚಲಾಗಿದೆ. ಕೆಲವು ಹೋಟೆಲ್ಗಳಲ್ಲಿ ನೀರಿನ ಮಿತ ಬಳಕೆಗೆ ಬೋರ್ಡ್ಗಳನ್ನು ಹಾಕಲಾಗಿದೆ. ಕಾಗದದ ಪ್ಲೇಟ್, ಲೋಟಗಳನ್ನು ಬಳಸಲಾಗುತ್ತಿದೆ.</p>.<p>ಸಾರ್ವಜನಿಕ ಶೌಚಾಲಯಗಳಲ್ಲೂ ನೀರಿಗೆ ಸಮಸ್ಯೆ ಎದುರಾಗಿದೆ. ಹಲವು ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೀರು ಸಿಗದೆ ಮಧ್ಯಾಹ್ನ ಶಾಲೆಗಳಿಗೆ ರಜೆ ನೀಡಲಾಗುತ್ತಿದೆ. ಕೂಡಲೇ ಮಳೆಬಿದ್ದರೆ ಮಾತ್ರ ನೀರಿನ ಸಮಸ್ಯೆ ಬಗೆಹರಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>