ಕನ್ನಡ ಮತ್ತು ಪ್ರಾದೇಶಿಕ ಭಾಷಾ ಕೇಂದ್ರದ ಸಂಯೋಜಕ ಡಾ. ಪೃಥ್ವಿರಾಜ ಕವತ್ತಾರು ಅತಿಥಿಗಳನ್ನು ಪರಿಚಯಿಸಿದರು. ಮಣಿಪಾಲ್ ಯೂನಿವರ್ಸಲ್ ಪ್ರೆಸ್ನ ಪ್ರಧಾನ ಸಂಪಾದಕರಾದ ಪ್ರೊ.ನೀತಾ ಇನಾಂದಾರ್, ಭಾಷಾ ವಿಭಾಗದ ಮುಖ್ಯಸ್ಥ ಪ್ರೊ.ರಾಹುಲ್ ಪುಟ್ಟಿ, ತತ್ತ್ವಶಾಸ್ತ್ರ ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ್ ಎನ್. ಆಚಾರ್ಯ ಅತಿಥಿಗಳನ್ನು ಗೌರವಿಸಿದರು. ಸ್ಪ್ಯಾನಿಶ್ ಭಾಷಾ ಉಪನ್ಯಾಸಕಿ ಮೇಘನಾ ಮಂಗಲ್ವೇಢೆ ಕಾರ್ಯಕ್ರಮವನ್ನು ನಿರ್ವಹಿಸಿದರು. ಭಾಷಾ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ‘ಪೊಯೆ-ಟ್ರಿ’ ಎಂಬ ವಿಶಿಷ್ಟ ಕನ್ನಡ ಮತ್ತು ಯುರೋಪಿಯನ್ ಭಾಷೆಗಳ ಅನುವಾದಿತ ಕಾವ್ಯಗಳನ್ನು ಪ್ರಸ್ತುತಪಡಿಸಿದರು.