ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಶತಚಂಡಿಕಾ ಯಾಗದ 3ನೇ ದಿನ ನಡೆದ ಚಂಡಿಕಾ ಪಾರಾಯಣದಲ್ಲಿ ಕುಟುಂಬ ಸಹಿತ ಭಾಗಿಯಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ ರಾಘವೇಂದ್ರ ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಕೆರಾಡಿ, ಬೈಂದೂರು ರೈಲು ಪ್ರಯಾಣಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ವೆಂಕಟೇಶ್ ಕಿಣಿ, ಬಾಬು ಶೆಟ್ಟಿ ತಗ್ಗರ್ಸೆ, ಸುರೇಶ್ ಬಟವಾಡಿ, ಶಂಕರ್ ಪೂಜಾರಿ ಯಡ್ತರೆ, ಸದಾಶಿವ ಡಿ. ಪಡುವರಿ, ಪುಷ್ಪರಾಜ್ ಶೆಟ್ಟಿ, ಉಮೇಶ್ ಕಲ್ಗದ್ದೆ, ಸಾಮ್ರಾಟ್ ಶೆಟ್ಟಿ ಇದ್ದರು.