<p><strong>ಉಡುಪಿ</strong>: ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಅವರಿಗೆ ಶನಿವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಮಾಹೆ ಸಹ ಕುಲಪತಿ ಡಾ.ನಾರಾಯಣ ಸಭಾಹಿತ್ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ, ಸಾಹಿತಿ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಅಧ್ಯಾಪನ ನಿರಂತರ ಪ್ರಕ್ರಿಯೆಯಾಗಿದ್ದು ಬರವಣಿಗೆ ಹಾಗೂ ಅಧ್ಯಾಪನ ಒಟ್ಟಾಗಿ ಸಾಗಿದರೆ ಅವರವರ ಕ್ಷೇತ್ರದಲ್ಲಿ ಛಾಪು ಬರಲಿದೆ ಎಂದರು.</p>.<p>ಬರವಣಿಗೆ ಬದುಕಿನ ಭಾಗವಾಗಬೇಕು. ಬರವಣಿಗೆಯ ನೈತಿಕತೆ ಉಳಿಸಿಕೊಳ್ಳಬೇಕು, ಕಾಲಕ್ಕೆ ತಕ್ಕಂತೆ ಅಧ್ಯಯನ ಕ್ರಮವೂ ಬದಲಾಗುತ್ತಿರಬೇಕು. ಇದರಿಂದ ವಿವಿಧ ಕ್ಷೇತ್ರಗಳ ಬಗ್ಗೆ ಜ್ಞಾನ ಲಭಿಸುತ್ತದೆ ಎಂದು ಸಲಹೆ ನೀಡಿದರು.</p>.<p>ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಪಂಡಿತ ಪರಂಪರೆಗೆ ಪ್ರಸಿದ್ಧಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆೆಯಲ್ಲಿ ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನದ ಅರಿವು ವಿಸ್ತಾರವಾಗುತ್ತದೆ ಎಂದರು.</p>.<p>ಇದೇ ಸಂದರ್ಭ ಮುಳಿಯ ಗೋಪಾಲಕೃಷ್ಣ ಭಟ್ ಅವರ ‘ದೊಡ್ಡವರ ಸಣ್ಣ ಕಥೆಗಳು’ ಕೃತಿಯನ್ನು ಮುಳಿಯ ರಘುರಾಮ ಭಟ್ ಬಿಡುಗಡೆ ಮಾಡಿದರು. ಮುಳಿಯ ರಾಘವಯ್ಯ ಕೃತಿ ಪರಿಚಯ ಮಾಡಿದರು.</p>.<p>ಪ್ರಶಸ್ತಿ ಆಯ್ಕೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋರಮಾ ಎಂ.ಭಟ್, ಲೇಖಕಿ ಬಿ.ಶಶಿಲೇಖಾ, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಇದ್ದರು.</p>.<p>ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ ಬಿ.ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಜಿಎಂ ಕಾಲೇಜಿನ ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.</p>.<p>ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಜಿಎಂ ಕಾಲೇಜು, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಅವರಿಗೆ ಶನಿವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಮಾಹೆ ಸಹ ಕುಲಪತಿ ಡಾ.ನಾರಾಯಣ ಸಭಾಹಿತ್ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ, ಸಾಹಿತಿ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಅಧ್ಯಾಪನ ನಿರಂತರ ಪ್ರಕ್ರಿಯೆಯಾಗಿದ್ದು ಬರವಣಿಗೆ ಹಾಗೂ ಅಧ್ಯಾಪನ ಒಟ್ಟಾಗಿ ಸಾಗಿದರೆ ಅವರವರ ಕ್ಷೇತ್ರದಲ್ಲಿ ಛಾಪು ಬರಲಿದೆ ಎಂದರು.</p>.<p>ಬರವಣಿಗೆ ಬದುಕಿನ ಭಾಗವಾಗಬೇಕು. ಬರವಣಿಗೆಯ ನೈತಿಕತೆ ಉಳಿಸಿಕೊಳ್ಳಬೇಕು, ಕಾಲಕ್ಕೆ ತಕ್ಕಂತೆ ಅಧ್ಯಯನ ಕ್ರಮವೂ ಬದಲಾಗುತ್ತಿರಬೇಕು. ಇದರಿಂದ ವಿವಿಧ ಕ್ಷೇತ್ರಗಳ ಬಗ್ಗೆ ಜ್ಞಾನ ಲಭಿಸುತ್ತದೆ ಎಂದು ಸಲಹೆ ನೀಡಿದರು.</p>.<p>ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಪಂಡಿತ ಪರಂಪರೆಗೆ ಪ್ರಸಿದ್ಧಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆೆಯಲ್ಲಿ ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನದ ಅರಿವು ವಿಸ್ತಾರವಾಗುತ್ತದೆ ಎಂದರು.</p>.<p>ಇದೇ ಸಂದರ್ಭ ಮುಳಿಯ ಗೋಪಾಲಕೃಷ್ಣ ಭಟ್ ಅವರ ‘ದೊಡ್ಡವರ ಸಣ್ಣ ಕಥೆಗಳು’ ಕೃತಿಯನ್ನು ಮುಳಿಯ ರಘುರಾಮ ಭಟ್ ಬಿಡುಗಡೆ ಮಾಡಿದರು. ಮುಳಿಯ ರಾಘವಯ್ಯ ಕೃತಿ ಪರಿಚಯ ಮಾಡಿದರು.</p>.<p>ಪ್ರಶಸ್ತಿ ಆಯ್ಕೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋರಮಾ ಎಂ.ಭಟ್, ಲೇಖಕಿ ಬಿ.ಶಶಿಲೇಖಾ, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಇದ್ದರು.</p>.<p>ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ ಬಿ.ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಜಿಎಂ ಕಾಲೇಜಿನ ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.</p>.<p>ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಜಿಎಂ ಕಾಲೇಜು, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>