ಕಾರ್ಯಕ್ರಮ ಉದ್ಘಾಟಿಸಿದ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆಶ್ರೇಣಿ ಗ್ರಂಥಪಾಲಕ ವೆಂಕಟೇಶ್ ನಾಯಕ್ ಮಾತನಾಡಿ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ಓಪನ್ ಎಜ್ಯುಕೇಶನ್ ರಿಸೋರ್ಸ್ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ವಿಷಯಗಳಿಗೆ ಸಂಬಂಧಪಟ್ಟ ಅಗಾಧ ಮಾಹಿತಿ ದೊರೆಯುತ್ತದೆ. ಆದರೆ ಮಾಹಿತಿ ಪಡೆದುಕೊಳ್ಳುವ ಜ್ಞಾನದ ಕೊರತೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಪನ್ಮೂಲಗಳ ಬಳಕೆಯಿಂದ ವಂಚಿತರಾಗುತ್ತಿದ್ದಾರೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ಸ್ಪರ್ಧೆಯಲ್ಲಿರಬೇಕಾದರೆ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯ ಎಂದರು. ಮಾಹಿತಿ ಪಡೆಯಲು ಅನುಕೂಲವಾಗುವ ವಿವಿಧ ಜಾಲತಾಣಗಳ ವಿವರ ನೀಡಿದರು.