ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿಗಳ ಬಂಧನ

Last Updated 8 ಜೂನ್ 2021, 3:06 IST
ಅಕ್ಷರ ಗಾತ್ರ

ಕುಂದಾಪುರ: ಶಂಕರನಾರಾಯಣ ಪೊಲೀಸ್‌ ಠಾಣೆ ವ್ಯಾಪ್ತಿಯ ಯಡಮೊಗೆ ಯಲ್ಲಿ ಶನಿವಾರ ರಾತ್ರಿ ನಡೆದ ಸಾಮಾಜಿಕ ಕಾರ್ಯಕರ್ತ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಮೊದಲನೇ ಆರೋಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಾಣೇಶ್ ಯಡಿಯಾಳ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾ ಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಎರಡನೇ ಆರೋಪಿ ರಾಜೇಶ್ ಭಟ್ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಮಂಗಳ ವಾರ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

ಎಸ್ಪಿ ಭೇಟಿ: ಘಟನೆ ನಡೆದ ಸ್ಥಳಕ್ಕೆ ಸೋಮವಾರ ಸಂಜೆ ಭೇಟಿ ನೀಡಿದ ಎಸ್ಪಿ ವಿಷ್ಣುವರ್ಧನ್, ಪ್ರಕರಣದ ಬಗ್ಗೆ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT