<p><strong>ಕುಂದಾಪುರ (ಉಡುಪಿ):</strong> ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕಾ ದೇವಿಗೆ ಕೋಟ್ಯಂತರ ಮೌಲ್ಯದ ವಜ್ರಖಚಿತ ಕಿರೀಟ, ಚಿನ್ನಾಭರಣವನ್ನು ಬುಧವಾರ ಅರ್ಪಿಸಿದ್ದಾರೆ.</p>.<p>ಈ ಹಿಂದೆ ದೇವಿಗೆ ವಜ್ರಖಚಿತ ಹಸ್ತ ನೀಡಿದ್ದ ಅವರು, ಈ ಬಾರಿ ವಜ್ರದ ಕಿರೀಟ, ಚಿನ್ನಾಭರಣ, ವೀರಭದ್ರ ದೇವರಿಗೆ ವಜ್ರಖಚಿತ ರಜತ ಕಿರೀಟ, ಬೆಳ್ಳಿ ಖಡ್ಗ ಸಮರ್ಪಿಸಿದ್ದಾರೆ.</p>.<p>ಪಂಚವಾದ್ಯಗಳೊಂದಿಗೆ ಕೊಲ್ಲೂರಿನ ಓಲಗ ಮಂಟಪದಿಂದ ರಥಬೀದಿಯಲ್ಲಿ ಪೂರ್ಣಕುಂಭ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕಿರೀಟ, ಚಿನ್ನಾಭರಣ ತರಲಾಯಿತು. ಕ್ಷೇತ್ರದ ಅರ್ಚಕರು ಪೂಜಾ ವಿಧಿವಿಧಾನ ಪೂರೈಸಿದ ಬಳಿಕ ದೇವರಿಗೆ ಕಿರೀಟ, ಆಭರಣಗಳನ್ನು ಒಪ್ಪಿಸಲಾಯಿತು. ದೇವಸ್ಥಾನದ ವತಿಯಿಂದ ಇಳಯರಾಜ ಅವರನ್ನು ಗೌರವಿಸಲಾಯಿತು.</p>.<p>‘ನನ್ನದೇನು ಇಲ್ಲ. ಎಲ್ಲಾ ಆ ಜಗನ್ಮಾತೆ ತಾಯಿ ಮೂಕಾಂಬಿಕೆಯ ಅನುಗ್ರಹ ಮತ್ತು ಆಶೀರ್ವಾದ’ ಎಂದು ಇಳಯರಾಜ ಹೇಳಿದರು.</p>.<p>ಇಳಯರಾಜ ಅವರ ಪುತ್ರ ಕಾರ್ತಿಕ್ ಇಳಯರಾಜ, ಮೊಮ್ಮಗ ಯತೀಶ್ ಇಳಯರಾಜ, ಮುಖಂಡ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ, ಸಹಾಯ ಕಾರ್ಯನಿರ್ವಹಣಾ ಅಧಿಕಾರಿ ತುಂಬಗಿ, ಅರ್ಚಕರಾದ ಶ್ರೀಧರ ಅಡಿಗ, ಕೆ.ಎನ್. ಗೋವಿಂದ ಅಡಿಗ, ವಿಘ್ನೇಶ್ವರ ಅಡಿಗ, ಎನ್. ಸುಬ್ರಮಣ್ಯ ಅಡಿಗ, ಸುರೇಶ್ ಭಟ್, ಶಿವರಾಮ ಅಡಿಗ, ನರಸಿಂಹ ಭಟ್, ಸುದರ್ಶನ್ ಜೋಯಿಸ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ (ಉಡುಪಿ):</strong> ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕಾ ದೇವಿಗೆ ಕೋಟ್ಯಂತರ ಮೌಲ್ಯದ ವಜ್ರಖಚಿತ ಕಿರೀಟ, ಚಿನ್ನಾಭರಣವನ್ನು ಬುಧವಾರ ಅರ್ಪಿಸಿದ್ದಾರೆ.</p>.<p>ಈ ಹಿಂದೆ ದೇವಿಗೆ ವಜ್ರಖಚಿತ ಹಸ್ತ ನೀಡಿದ್ದ ಅವರು, ಈ ಬಾರಿ ವಜ್ರದ ಕಿರೀಟ, ಚಿನ್ನಾಭರಣ, ವೀರಭದ್ರ ದೇವರಿಗೆ ವಜ್ರಖಚಿತ ರಜತ ಕಿರೀಟ, ಬೆಳ್ಳಿ ಖಡ್ಗ ಸಮರ್ಪಿಸಿದ್ದಾರೆ.</p>.<p>ಪಂಚವಾದ್ಯಗಳೊಂದಿಗೆ ಕೊಲ್ಲೂರಿನ ಓಲಗ ಮಂಟಪದಿಂದ ರಥಬೀದಿಯಲ್ಲಿ ಪೂರ್ಣಕುಂಭ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕಿರೀಟ, ಚಿನ್ನಾಭರಣ ತರಲಾಯಿತು. ಕ್ಷೇತ್ರದ ಅರ್ಚಕರು ಪೂಜಾ ವಿಧಿವಿಧಾನ ಪೂರೈಸಿದ ಬಳಿಕ ದೇವರಿಗೆ ಕಿರೀಟ, ಆಭರಣಗಳನ್ನು ಒಪ್ಪಿಸಲಾಯಿತು. ದೇವಸ್ಥಾನದ ವತಿಯಿಂದ ಇಳಯರಾಜ ಅವರನ್ನು ಗೌರವಿಸಲಾಯಿತು.</p>.<p>‘ನನ್ನದೇನು ಇಲ್ಲ. ಎಲ್ಲಾ ಆ ಜಗನ್ಮಾತೆ ತಾಯಿ ಮೂಕಾಂಬಿಕೆಯ ಅನುಗ್ರಹ ಮತ್ತು ಆಶೀರ್ವಾದ’ ಎಂದು ಇಳಯರಾಜ ಹೇಳಿದರು.</p>.<p>ಇಳಯರಾಜ ಅವರ ಪುತ್ರ ಕಾರ್ತಿಕ್ ಇಳಯರಾಜ, ಮೊಮ್ಮಗ ಯತೀಶ್ ಇಳಯರಾಜ, ಮುಖಂಡ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ, ಸಹಾಯ ಕಾರ್ಯನಿರ್ವಹಣಾ ಅಧಿಕಾರಿ ತುಂಬಗಿ, ಅರ್ಚಕರಾದ ಶ್ರೀಧರ ಅಡಿಗ, ಕೆ.ಎನ್. ಗೋವಿಂದ ಅಡಿಗ, ವಿಘ್ನೇಶ್ವರ ಅಡಿಗ, ಎನ್. ಸುಬ್ರಮಣ್ಯ ಅಡಿಗ, ಸುರೇಶ್ ಭಟ್, ಶಿವರಾಮ ಅಡಿಗ, ನರಸಿಂಹ ಭಟ್, ಸುದರ್ಶನ್ ಜೋಯಿಸ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>