<p>ಉಡುಪಿ: ಸತತ 5ನೇ ಬಾರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎಸ್.ಮುಹಮ್ಮದ್ ಮಸೂದ್ ಅವರಿಗೆ ಮುಸ್ಲಿಮ್ ಸೆಂಟ್ರಲ್ ಕಮಿಟಿ ಉಡುಪಿ, ಕಾರ್ಕಳ, ಕುಂದಾಪುರ ನೇತೃತ್ವದಲ್ಲಿ ಮಲ್ಪೆಯ ನಕ್ವಾಸ್ ಹೌಸ್ನಲ್ಲಿ ಶನಿವಾರ ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಹಮ್ಮದ್ ಮಸೂದ್ ಪ್ರಸ್ತುತ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸಲು ಸಂಘಟಿತವಾದ ಶ್ರಮ ಅಗತ್ಯ. ಸಮುದಾಯದ ಸಮಸ್ಯೆಗಳ ವಿರುದ್ಧ ಹಾಗೂ ನೊಂದವರಿಗೆ ನ್ಯಾಯ ದೊರಕಸಿಕೊಡಲು ಮುಸ್ಲಿಂ ಕಮಿಟಿ ಬದ್ಧವಾಗಿದೆ ಎಂದರು.</p>.<p>ಉಡುಪಿ ಜಿಲ್ಲೆಯಲ್ಲಿ ನಡೆದ ಹಸನಬ್ಬ ಬೆತ್ತಲೆ ಪ್ರಕರಣ, ಹಿಜಾಬ್ ವಿವಾದ ಹಾಗೂ ಶಿರೂರಿನಲ್ಲಿ ನೆರೆ ಬಂದ ಸಂದರ್ಭದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೆರವಿಗೆ ಧಾವಿಸಿತ್ತು. ಮುಂದೆಯೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದೆ ಎಂದರು.</p>.<p>ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಉಪಾಧ್ಯಕ್ಷ ಸಿ.ಮೊಹಮದ್ ಹಾಜಿ, ಇಬ್ರಾಹಿಂ ಕೋಡಿ ಜಾಲ್, ಬಾಷಾ ಸಾಹೇಬ್ ಕುಂದಾಪುರ, ಸಂಘಟನಾ ಕಾರ್ಯದರ್ಶಿ ಸಂಶುದ್ದೀನ್ ಸುಳ್ಯ, ಬಿ.ಎಸ್.ಇಮ್ತಿಯಾಝ್, ನಾಸೀರ್ ಯಾದಗರ್, ಕಾರ್ಯದರ್ಶಿ ಡಾ.ಮುಹಮ್ಮದ್ ಆರೀಫ್ ಮಸೂದ್, ಸಿ.ಎಂ.ಮುಸ್ತಫಾ, ಆಬೀದ್ ಜಲಿಯಲ್, ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕೆ ಉಪಸ್ಥಿತರಿದ್ದರು.</p>.<p>ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಗೌರವಾಧ್ಯಕ್ಷ ಪರ್ಕಳ ಹಾಜಿ ಅಬ್ದುಲ್ಲಾ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ಮುಶ್ತಾಕ್ ಬೆಳ್ವೆ, ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ಮುಹಮ್ಮದ್ ಅರ್ಶಾದ್, ಉದ್ಯಾವರ ಮಸೀದಿ ಅಧ್ಯಕ್ಷ ರೆಹಮತುಲ್ಲಾ, ಕೊಳಂಬೆ ಮದೀನ ಮಸೀದಿ ಅಧ್ಯಕ್ಷ ಶಮೀಮ್ ಸಾಹೇಬ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಉದ್ಯಮಿ ಪರ್ಕಳ ಅಬೂಬಕ್ಕರ್, ಜಮಾಲ್, ಸಲೀಂ, ಎಸ್.ಎಸ್.ರಝಾಕ್ ಇದ್ದರು.</p>.<p>ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಕೆ.ಎಸ್.ಇಮ್ತಿಯಾಜ್ ಅಹ್ಮದ್ ಸ್ವಾಗತಿಸಿದರು. ಕಾರ್ಯದರ್ಶಿ ಯಹ್ಯಾ ನಕ್ವಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಖಲೀಲ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಸತತ 5ನೇ ಬಾರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎಸ್.ಮುಹಮ್ಮದ್ ಮಸೂದ್ ಅವರಿಗೆ ಮುಸ್ಲಿಮ್ ಸೆಂಟ್ರಲ್ ಕಮಿಟಿ ಉಡುಪಿ, ಕಾರ್ಕಳ, ಕುಂದಾಪುರ ನೇತೃತ್ವದಲ್ಲಿ ಮಲ್ಪೆಯ ನಕ್ವಾಸ್ ಹೌಸ್ನಲ್ಲಿ ಶನಿವಾರ ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಹಮ್ಮದ್ ಮಸೂದ್ ಪ್ರಸ್ತುತ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸಲು ಸಂಘಟಿತವಾದ ಶ್ರಮ ಅಗತ್ಯ. ಸಮುದಾಯದ ಸಮಸ್ಯೆಗಳ ವಿರುದ್ಧ ಹಾಗೂ ನೊಂದವರಿಗೆ ನ್ಯಾಯ ದೊರಕಸಿಕೊಡಲು ಮುಸ್ಲಿಂ ಕಮಿಟಿ ಬದ್ಧವಾಗಿದೆ ಎಂದರು.</p>.<p>ಉಡುಪಿ ಜಿಲ್ಲೆಯಲ್ಲಿ ನಡೆದ ಹಸನಬ್ಬ ಬೆತ್ತಲೆ ಪ್ರಕರಣ, ಹಿಜಾಬ್ ವಿವಾದ ಹಾಗೂ ಶಿರೂರಿನಲ್ಲಿ ನೆರೆ ಬಂದ ಸಂದರ್ಭದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೆರವಿಗೆ ಧಾವಿಸಿತ್ತು. ಮುಂದೆಯೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದೆ ಎಂದರು.</p>.<p>ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಉಪಾಧ್ಯಕ್ಷ ಸಿ.ಮೊಹಮದ್ ಹಾಜಿ, ಇಬ್ರಾಹಿಂ ಕೋಡಿ ಜಾಲ್, ಬಾಷಾ ಸಾಹೇಬ್ ಕುಂದಾಪುರ, ಸಂಘಟನಾ ಕಾರ್ಯದರ್ಶಿ ಸಂಶುದ್ದೀನ್ ಸುಳ್ಯ, ಬಿ.ಎಸ್.ಇಮ್ತಿಯಾಝ್, ನಾಸೀರ್ ಯಾದಗರ್, ಕಾರ್ಯದರ್ಶಿ ಡಾ.ಮುಹಮ್ಮದ್ ಆರೀಫ್ ಮಸೂದ್, ಸಿ.ಎಂ.ಮುಸ್ತಫಾ, ಆಬೀದ್ ಜಲಿಯಲ್, ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕೆ ಉಪಸ್ಥಿತರಿದ್ದರು.</p>.<p>ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಗೌರವಾಧ್ಯಕ್ಷ ಪರ್ಕಳ ಹಾಜಿ ಅಬ್ದುಲ್ಲಾ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ಮುಶ್ತಾಕ್ ಬೆಳ್ವೆ, ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ಮುಹಮ್ಮದ್ ಅರ್ಶಾದ್, ಉದ್ಯಾವರ ಮಸೀದಿ ಅಧ್ಯಕ್ಷ ರೆಹಮತುಲ್ಲಾ, ಕೊಳಂಬೆ ಮದೀನ ಮಸೀದಿ ಅಧ್ಯಕ್ಷ ಶಮೀಮ್ ಸಾಹೇಬ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಉದ್ಯಮಿ ಪರ್ಕಳ ಅಬೂಬಕ್ಕರ್, ಜಮಾಲ್, ಸಲೀಂ, ಎಸ್.ಎಸ್.ರಝಾಕ್ ಇದ್ದರು.</p>.<p>ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಕೆ.ಎಸ್.ಇಮ್ತಿಯಾಜ್ ಅಹ್ಮದ್ ಸ್ವಾಗತಿಸಿದರು. ಕಾರ್ಯದರ್ಶಿ ಯಹ್ಯಾ ನಕ್ವಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಖಲೀಲ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>