ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮುತಾಲಿಕ್, ಬೇನಾಮಿ ಆಸ್ತಿ ಖರೀದಿಯ ಹಿಂದೆ ಜಿಲ್ಲೆಯ ಪ್ರಭಾವಿ ಸಚಿವರು ಹಾಗೂ ಸಂಬಂಧಿಗಳ ಕೈವಾಡವಿದ್ದು ಪ್ರಕರಣದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿಗಳ ಆಪ್ತರೂ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇರುವುದರಿಂದ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.