<p><strong>ಬೈಂದೂರು</strong>: ಗುಣಮಟ್ಟದ ಶಿಕ್ಷಣ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉತ್ತಮ ಕಾರ್ಯನಿರ್ವಹಣೆಗಾಗಿ ನಾಗೂರು ಹಿಂದುಸ್ಥಾನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪುಷ್ಟಿ ಕಾರ್ಯಕ್ರಮದಡಿ ರಾಜ್ಯ ಪ್ರಶಸ್ತಿ ದೊರಕಿದೆ. ಪ್ರಶಸ್ತಿ ಪತ್ರ ಮತ್ತು ₹1 ಲಕ್ಷ ನಗದು ಮೇಲುಸ್ತುವಾರಿ ಸಮಿತಿಗೆ ಸಿಗಲಿದೆ.</p><p>ವಿದ್ಯಾವಾಹಿನಿ ಪೋರ್ಟಲ್ನಲ್ಲಿ ಬೈಂದೂರು ತಾಲ್ಲೂಕಿನ 191 ಶಾಲೆಗಳು ಪ್ರಶಸ್ತಿಗಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ ತಾಲ್ಲೂಕಿನಿಂದ ಹಿಂದುಸ್ಥಾನಿ ಶಾಲೆಯನ್ನು ಆರಿಸಲಾಗಿದೆ.</p><p>ಶಾಲೆಯ ಇತಿಹಾಸ: 1973ರಲ್ಲಿ ಆರಂಭಗೊಂಡ ನಾಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಹಿಂದುಸ್ಥಾನಿ ಉರ್ದು ಶಾಲೆಯಲ್ಲಿ ಈಗ ಒಟ್ಟು 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.</p><p>2018ರಲ್ಲಿ ಕೇವಲ ಎಂಟು ವಿದ್ಯಾರ್ಥಿಗಳು ಇದ್ದು ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯನ್ನು ಬೇರೆ ಶಾಲೆಯೊಂದಿಗೆ ವಿಲೀನಗೊಳಿಸಲು ಇಲಾಖೆ ಮುಂದಾಗಿತ್ತು. ಆದರೆ ಶಾಲೆಯನ್ನು ಉಳಿಸಿಕೊಳ್ಳಬೇಕೆಂದು ಊರವರು ಮತ್ತು ಶಿಕ್ಷಕರ ಬಳಗದವರು ಪಣ ತೊಟ್ಟರು.</p><p>ಎಸ್ಡಿಎಂಸಿ ಜೊತೆಯಲ್ಲಿ ಎಸ್ಡಿಸಿ ರಚಿಸಿ ಸ್ವಂತ ವಾಹನ, ಪೀಠೋಪಕರಣ ಖರೀದಿಸಿ, ರೈಲಿನಂತೆ ಕಾಣುವ ಬಣ್ಣ ಬಳಿದು ಕೆಲವು ತಾತ್ಕಾಲಿಕ ವ್ಯವಸ್ಥೆಗಳನ್ನು ಕಲ್ಪಿಸಲಾಯಿತು. ಮನೆ ಮನೆಗೆ ತೆರಳಿ ಶಾಲೆಗೆ ಮಕ್ಕಳನ್ನು ಸೇರಿಸುವ ಪ್ರಯತ್ನ ನಡೆಯಿತು. 2023ರಲ್ಲಿ ಸುವರ್ಣ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.</p><p>ಊರವರ ಸಹಕಾರದಿಂದ ಶಾಲೆ ಅಭಿವೃದ್ಧಿಯಾಗಿದ್ದು ಒಂದರಿಂದ ಏಳನೇ ತರಗತಿ ವರೆಗೆ 222 ವಿದ್ಯಾರ್ಥಿಗಳು ಹಾಗೂ ಎಲ್ಕೆಜಿ, ಯುಕೆಜಿಯಲ್ಲಿ 60 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚುವರಿ 4 ಕೊಠಡಿಗಳ ನಿರ್ಮಾಣ ಆಗಿದೆ. ಶಿಕ್ಷಕರ ಕೊರತೆ ಇಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತುರ್ತಾಗಿ ಶಾಲಾ ವಾಹನದ ವ್ಯವಸ್ಥೆ ಆಗಬೇಕಿದೆ ಎಂದು ಮುಖ್ಯ ಶಿಕ್ಷಕ ವಿಶ್ವನಾಥ ಪೂಜಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಂದೂರು</strong>: ಗುಣಮಟ್ಟದ ಶಿಕ್ಷಣ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉತ್ತಮ ಕಾರ್ಯನಿರ್ವಹಣೆಗಾಗಿ ನಾಗೂರು ಹಿಂದುಸ್ಥಾನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪುಷ್ಟಿ ಕಾರ್ಯಕ್ರಮದಡಿ ರಾಜ್ಯ ಪ್ರಶಸ್ತಿ ದೊರಕಿದೆ. ಪ್ರಶಸ್ತಿ ಪತ್ರ ಮತ್ತು ₹1 ಲಕ್ಷ ನಗದು ಮೇಲುಸ್ತುವಾರಿ ಸಮಿತಿಗೆ ಸಿಗಲಿದೆ.</p><p>ವಿದ್ಯಾವಾಹಿನಿ ಪೋರ್ಟಲ್ನಲ್ಲಿ ಬೈಂದೂರು ತಾಲ್ಲೂಕಿನ 191 ಶಾಲೆಗಳು ಪ್ರಶಸ್ತಿಗಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ ತಾಲ್ಲೂಕಿನಿಂದ ಹಿಂದುಸ್ಥಾನಿ ಶಾಲೆಯನ್ನು ಆರಿಸಲಾಗಿದೆ.</p><p>ಶಾಲೆಯ ಇತಿಹಾಸ: 1973ರಲ್ಲಿ ಆರಂಭಗೊಂಡ ನಾಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಹಿಂದುಸ್ಥಾನಿ ಉರ್ದು ಶಾಲೆಯಲ್ಲಿ ಈಗ ಒಟ್ಟು 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.</p><p>2018ರಲ್ಲಿ ಕೇವಲ ಎಂಟು ವಿದ್ಯಾರ್ಥಿಗಳು ಇದ್ದು ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯನ್ನು ಬೇರೆ ಶಾಲೆಯೊಂದಿಗೆ ವಿಲೀನಗೊಳಿಸಲು ಇಲಾಖೆ ಮುಂದಾಗಿತ್ತು. ಆದರೆ ಶಾಲೆಯನ್ನು ಉಳಿಸಿಕೊಳ್ಳಬೇಕೆಂದು ಊರವರು ಮತ್ತು ಶಿಕ್ಷಕರ ಬಳಗದವರು ಪಣ ತೊಟ್ಟರು.</p><p>ಎಸ್ಡಿಎಂಸಿ ಜೊತೆಯಲ್ಲಿ ಎಸ್ಡಿಸಿ ರಚಿಸಿ ಸ್ವಂತ ವಾಹನ, ಪೀಠೋಪಕರಣ ಖರೀದಿಸಿ, ರೈಲಿನಂತೆ ಕಾಣುವ ಬಣ್ಣ ಬಳಿದು ಕೆಲವು ತಾತ್ಕಾಲಿಕ ವ್ಯವಸ್ಥೆಗಳನ್ನು ಕಲ್ಪಿಸಲಾಯಿತು. ಮನೆ ಮನೆಗೆ ತೆರಳಿ ಶಾಲೆಗೆ ಮಕ್ಕಳನ್ನು ಸೇರಿಸುವ ಪ್ರಯತ್ನ ನಡೆಯಿತು. 2023ರಲ್ಲಿ ಸುವರ್ಣ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.</p><p>ಊರವರ ಸಹಕಾರದಿಂದ ಶಾಲೆ ಅಭಿವೃದ್ಧಿಯಾಗಿದ್ದು ಒಂದರಿಂದ ಏಳನೇ ತರಗತಿ ವರೆಗೆ 222 ವಿದ್ಯಾರ್ಥಿಗಳು ಹಾಗೂ ಎಲ್ಕೆಜಿ, ಯುಕೆಜಿಯಲ್ಲಿ 60 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚುವರಿ 4 ಕೊಠಡಿಗಳ ನಿರ್ಮಾಣ ಆಗಿದೆ. ಶಿಕ್ಷಕರ ಕೊರತೆ ಇಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತುರ್ತಾಗಿ ಶಾಲಾ ವಾಹನದ ವ್ಯವಸ್ಥೆ ಆಗಬೇಕಿದೆ ಎಂದು ಮುಖ್ಯ ಶಿಕ್ಷಕ ವಿಶ್ವನಾಥ ಪೂಜಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>