ಪದವಿಪೂರ್ವ ಕಾಲೇಜು ವಿಭಾಗದ ಅಧ್ಯಕ್ಷ ವಿವೇಕಾನಂದ ಶೆಣೈ ಅಧ್ಯಕ್ಷತೆ ವಹಿಸಿದ್ದರು.ಗಣಿತ ಉಪನ್ಯಾಸಕಿ ಭಾರತಿ, ಚಿತ್ರಕಲಾ ಶಿಕ್ಷಕ ಸದಾನಂದ ಅವರನ್ನು ಸನ್ಮಾನಿಸಲಾಯಿತು. ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯ ಜೆರಾಲ್ಡ್ ಡಿ’ಸಿಲ್ವ, ಸಂಸ್ಥೆಯ ಶಿಕ್ಷಕ - ರಕ್ಷಕ ಸಂಘದ ಪ್ರೌಢಶಾಲಾ ವಿಭಾಗದ ಅಧ್ಯಕ್ಷ ಅಬ್ಬೂಬಕ್ಕರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕ ಮೇರಿಯನ್ ಡಿ’ಸೋಜ, ಶಿಕ್ಷಕ ರಕ್ಷಕ ಸಂಘದ ಅಜಿತ್ ಹೆಗ್ಡೆ ಇದ್ದರು. ಉದಯರವಿ ಸ್ವಾಗತಿಸಿದರು. ಹೇಮಲತಾ, ಕವಿತಾ ನಿರೂಪಿಸಿದರು. ಶಕೀಲಾ ಶೆಟ್ಟಿ ವಂದಿಸಿದರು.